ಮಹಾಕುಂಭ ಮೇಳದಲ್ಲಿ ವೃದ್ಧರು 
ದೇಶ

ಮಹಾಕುಂಭ ಮೇಳ 2025: 2,000 ವೃದ್ಧರಿಗೆ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ವ್ಯವಸ್ಥೆ!

ಮಹಾ ಕುಂಭ ಮೇಳದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ವೃದ್ಧರು ಮತ್ತು ಮತ್ತು ಶ್ರವಣದೋಷವುಳ್ಳವರಿಗೆ ವಿಶೇಷ ಶಿಬಿರವನ್ನು ಪ್ರಾರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಈ ಶಿಬಿರದಲ್ಲಿ ಅಗತ್ಯವಿರುವವರಿಗೆ ಉಚಿತ ತಪಾಸಣೆ ನಡೆಸಿ, ಪರಿಕರಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಮಹಾಕುಂಭ ನಗರ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ 2025 ಮುಗಿಯುವುದರೊಳಗೆ 2,000 ವೃದ್ಧರಿಗೆ ಸಂಗಮದಲ್ಲಿ ಪುಣ್ಯ ಸ್ನಾನಕ್ಕಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ತಿಳಿಸಿದೆ.

ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಸಂಗಮದ ದಡದಲ್ಲಿ ಪೆಂಡಲ್ ಹಾಕಲಾಗುತ್ತಿದೆ. ಶ್ರವಣ ಕುಂಭ ಉಪಕ್ರಮದಡಿ ಇದೊಂದು ಪ್ರಮುಖ ಕಾರ್ಯಕ್ರಮವಾಗಿದೆ. ಶ್ರವಣ ದೋಷವಿರುವವರಿಗೆ ತಪಾಸಣೆ ಮತ್ತು ನೆರವು ನೀಡುವ ಮೂಲಕ ಸಾವಿರಾರು ಜನರಿಗೆ ಸೇವೆ ನೀಡಲಾಗುತ್ತದೆ.

ಮಹಾ ಕುಂಭ ಮೇಳದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ವೃದ್ಧರು ಮತ್ತು ಮತ್ತು ಶ್ರವಣದೋಷವುಳ್ಳವರಿಗೆ ವಿಶೇಷ ಶಿಬಿರವನ್ನು ಪ್ರಾರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಈ ಶಿಬಿರದಲ್ಲಿ ಅಗತ್ಯವಿರುವವರಿಗೆ ಉಚಿತ ತಪಾಸಣೆ ನಡೆಸಿ, ಪರಿಕರಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಈ ಉಪಕ್ರಮದ ಮೂಲಕ, ವಯಸ್ಸಾದವರು, ವಿಶೇಷವಾಗಿ ಸರ್ಕಾರಿ ವೃದ್ಧಾಶ್ರಮಗಳಿಂದ ಬಂದವರು ಕುಂಭಮೇಳವನ್ನು ಕಣ್ತುಂಬಿಕೊಳ್ಳಬಹುದಾಗಿದ್ದು,. ವಿವಿಧ ವೃದ್ಧಾಶ್ರಮಗಳ ಹಿರಿಯ ನಾಗರಿಕರಿಗಾಗಿ ಕುಂಭ ಪ್ರದೇಶದಲ್ಲಿ 100 ಹಾಸಿಗೆಗಳ ಆಶ್ರಮವನ್ನು ಸ್ಥಾಪಿಸಲಾಗಿದೆ.

ವಯಸ್ಸಾದ ಭಕ್ಚರು ಆರಾಮವಾಗಿ ಉಳಿಯಲು, ಸಂಗಮ ಸ್ನಾನ ಮತ್ತು ಮಹಾ ಕುಂಭದ ಇತರ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಆಶ್ರಮದಲ್ಲಿ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.

ಇಲ್ಲಿಯವರೆಗೆ, ಮಿರ್ಜಾಪುರ, ಗೊಂಡಾ, ಸಿದ್ಧಾರ್ಥನಗರ, ಭದೋಹಿ, ಕೌಶಂಬಿ, ಹರ್ದೋಯಿ, ಸೀತಾಪುರ್ ಮತ್ತು ಲಖನೌ ಜಿಲ್ಲೆಗಳಿಂದ 500 ಕ್ಕೂ ಹೆಚ್ಚು ಹಿರಿಯ ನಾಗರಿಕರು ಮಹಾಕುಂಭದಲ್ಲಿ ಭಾಗವಹಿಸಿದ್ದಾರೆ. ಫೆಬ್ರವರಿ 26 ರೊಳಗೆ 2,000 ಹಿರಿಯ ಭಕ್ತರಿಗೆ ಪುಣ್ಯ ಸ್ನಾನವನ್ನು ಸರ್ಕಾರ ಯೋಜಿಸಿದೆ.

ಡಬಲ್ ಇಂಜಿನ್ ಸರ್ಕಾರವು ರಾಜ್ಯದಾದ್ಯಂತ ಹಿರಿಯ ನಾಗರಿಕರ ಸುರಕ್ಷತೆ, ಗೌರವ ಮತ್ತು ಆರೋಗ್ಯಕ್ಕಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮಹಾಕುಂಭ ಪ್ರದೇಶದಲ್ಲಿ ಶ್ರಾವಣ ಕುಂಭ ಆಯೋಜಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ರಾಜ್ಯ ಸಚಿವ ಅಸಿಮ್ ಅರುಣ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT