ಮಲ್ಲಿಕಾರ್ಜುನ ಖರ್ಗೆ 
ದೇಶ

'ಸುಮ್ನೆ ಕುತ್ಕೋ': ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಮಾಜಿ ಪ್ರಧಾನಿ ಪುತ್ರನ ವಿರುದ್ಧ ಖರ್ಗೆ ಕೆಂಡಾಮಂಡಲ

ಖರ್ಗೆ ಅವರು ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಸರ್ಕಾರವನ್ನು ಟೀಕಿಸುತ್ತಿದ್ದಾಗ, ನೀರಜ್‌ ಶೇಖರ್‌ ಪದೇ ಪದೇ ಅಡ್ಡಿಪಡಿಸಿದರು.

ನವದೆಹಲಿ: ರಾಜ್ಯಸಭೆಯಲ್ಲಿ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪದೇಪದೇ ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ, ಬಿಜೆಪಿ ಸಂಸದ ನೀರಜ್ ಶೇಖರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಖರ್ಗೆ ಅವರು ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಸರ್ಕಾರವನ್ನು ಟೀಕಿಸುತ್ತಿದ್ದಾಗ, ನೀರಜ್‌ ಶೇಖರ್‌ ಪದೇ ಪದೇ ಅಡ್ಡಿಪಡಿಸಿದರು. ಇದರಿಂದ ಕೆರಳಿದ ಮಲ್ಲಿಕಾರ್ಜುನ ಖರ್ಗೆ, 'ತೇರಾ ಬಾಪ್‌ ಮೇರಾ ಸಾಥಿ ತಾ..'(ನಿನ್ನ ತಂದೆ ನನ್ನ ಗೆಳೆಯರಾಗಿದ್ದರು) ಎಂದು ಏರುಧ್ವನಿಯಲ್ಲಿ ಗುಡುಗಿದರು.

"ನಿನ್ನ ಅಪ್ಪ(ಮಾಜಿ ಪ್ರಧಾನಿ ಚಂದ್ರಶೇಖರ್‌) ನನ್ನ ಸಮಕಾಲೀನರು. ನಾನು ನಿನ್ನನ್ನು ಬಾಲ್ಯದಲ್ಲಿ ನೋಡಿದ್ದೇನೆ. ನನ್ನ ಭಾಷಣಕ್ಕೆ ಅಡ್ಡಿಪಡಿಸದೇ ಸುಮ್ಮನೆ ಕುಳಿತಿಕೋ.." ಎಂದು ನೀರಜ್‌ ಶೇಖರ್‌ ಅವರನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಸಿಟ್ಟಿನಲ್ಲಿ ಹೇಳಿದರು.

ಖರ್ಗೆ ಅವರ ಆಕ್ರೋಶ ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು, ಸಭಾಪತಿ ಜಗದೀಪ್ ಧಂಕರ್ ಅವರು ಮಧ್ಯಪ್ರವೇಶಿಸಿ ಎರಡೂ ಕಡೆಯವರು ಶಾಂತವಾಗಿರುವಂತೆ ಕೇಳಿಕೊಂಡರು.

"ಚಂದ್ರಶೇಖರ್ ಜೀ ಈ ದೇಶ ಕಂಡ ಅತ್ಯಂತ ಎತ್ತರದ ನಾಯಕರಲ್ಲಿ ಒಬ್ಬರು. ದೇಶದಲ್ಲಿ ಚಂದ್ರಶೇಖರ ಜೀ ಅವರ ಬಗ್ಗೆ ಅಪಾರ ಗೌರವ ಇದೆ". .ಮಾಜಿ ಪ್ರಧಾನಿಯ ಬಗೆಗಿನ ತಮ್ಮ ಉಲ್ಲೇಖವನ್ನು ಹಿಂಪಡೆಯಿರಿ.." ಎಂದು ಜಗದೀಪ್‌ ಧನ್ಕರ್‌ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಿದರು.

ಆದರೆ ತಮ್ಮ ಮಾತನ್ನು ಹಿಂಪಡೆಯಲು ನಿರಾಕರಿಸಿದ ಮಲ್ಲಿಕಾರ್ಜುನ ಖರ್ಗೆ, "ನಾನು ಕೂಡ ಚಂದ್ರಶೇಖರ್‌ ಅವರನ್ನು ಗೌರವಿಸುತ್ತೇನೆ. ನಾವಿಬ್ಬರೂ ಒಟ್ಟಿಗೆ ಜೈಲಿನಲ್ಲಿ ಕಾಲ ಕಳೆದಿದ್ದೇವೆ. ಅಲ್ಲದೇ ನನಗೆ ನೀರಜ್‌ ಶೇಖರ್‌ ಮೇಲೂ ಮಮಕಾರವಿದೆ. ನಾವಿಬ್ಬರೂ ಸದನದ ಹೊರಗೆ ಆಪ್ತವಾಗಿ ಭೇಟಿಯಾಗುತ್ತೇವೆ. ನನ್ನ ಭಾಷಣಕ್ಕೆ ಅಡ್ಡಿಪಡಿಸಿದ್ದಕ್ಕೆ ನಾನು ಅವರನ್ನು ಗದರಿದೆ.." ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT