ದೆಹಲಿ ಚುನಾವಣೆ. 
ದೇಶ

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ 2025ರ ಮತದಾನ ಪ್ರಕ್ರಿಯೆ ಬುಧವಾರ ಆರಂಭಗೊಂಡಿದ್ದು, ಪ್ರಧಾನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮುಂದಾಳತ್ವದ ಆಮ್​ ಆದ್ಮಿ ಪಕ್ಷದ ನಡುವೆ ಗೆಲುವಿಗಾಗಿ ಭಾರೀ ಪೈಪೋಟಿ ಶುರುವಾಗಿದೆ. ಹೀಗಾಗಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಬವಾಗಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ. ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಸುಳಿವು ದೊರೆಯಲಿದೆ.

ಮಾಜಿ ಮುಖ್ಯಮಂತ್ರ ಅರವಿಂದ ಕೇಜ್ರಿವಾಲ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ಧ ಬಿಜೆಪಿಯಿಂದ ರಮೇಶ್ ಬಿದೂರಿ ಕಾಂಗ್ರೆಸ್ ನಿಂದ ಅಲ್ಕಾ ಲಂಬಾ ಕಣದಲ್ಲಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ ಮೊದಲಾದವರು ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ ಆದರೆ, ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

SCROLL FOR NEXT