ಅಮೃತಸರಕ್ಕೆ ಬಂದಿಳಿದ ಭಾರತೀಯರು 
ದೇಶ

ಅಮೆರಿಕದಿಂದ ಗಡೀಪಾರು: ಅಮೃತಸರಕ್ಕೆ ಬಂದಿಳಿದ 104 ಭಾರತೀಯರು!

ಫೆಬ್ರವರಿ 4 ರಂದು ಬೆಳಗ್ಗೆ3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ಹೊರಟಿದ್ದ C-17 ವಿಮಾನ ಇಂದು ಬೆಳಿಗ್ಗೆ ಅಮೃತಸರಕ್ಕೆ ಬರಬೇಕಾಗಿತ್ತು. ಆದರೆ ಸ್ವಲ ವಿಳಂಬವಾಗಿ ಬಂದಿಳಿದಿದೆ. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರು ಎಂದು ವರದಿಯಾಗಿದೆ.

ಅಮೃತಸರ: ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯರು ಸ್ವದೇಶಕ್ಕೆ ಆಗಮಿಸಿದ್ದಾರೆ. 104 ಅಕ್ರಮ ಭಾರತೀಯ ವಲಸಿಗರಿದ್ದ ಯುಎಸ್ ಮಿಲಿಟರಿ ವಿಮಾನ ಬುಧವಾರ ಮಧ್ಯಾಹ್ನ ಪಂಜಾಬಿನ ಅಮೃತಸರದಲ್ಲಿ ಬಂದಿಳಿಯಿತು.

ಫೆಬ್ರವರಿ 4 ರಂದು ಬೆಳಗ್ಗೆ3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ಹೊರಟಿದ್ದ C-17 ವಿಮಾನ ಇಂದು ಬೆಳಿಗ್ಗೆ ಅಮೃತಸರಕ್ಕೆ ಬರಬೇಕಾಗಿತ್ತು. ಆದರೆ ಸ್ವಲ ವಿಳಂಬವಾಗಿ ಬಂದಿಳಿದಿದೆ. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರು ಎಂದು ವರದಿಯಾಗಿದೆ.

ನವದೆಹಲಿಯಲ್ಲಿರುವ ಯುಎಸ್ ರಾಯಭಾರ ಕಚೇರಿ ಗಡೀಪಾರು ವಿಮಾನದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸದಿದ್ದರೂ, ವಾಷಿಂಗ್ಟನ್ ವಲಸೆ ನೀತಿಗಳನ್ನು ಬಿಗಿಗೊಳಿಸುತ್ತಿದ್ದು, ಅಕ್ರಮವಾಗಿ ದೇಶದಲ್ಲಿರುವ ವ್ಯಕ್ತಿಗಳನ್ನು ಹೊರಗೆ ಕಳುಹಿಸುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ.

ಫೆಬ್ರವರಿ 12 ರಿಂದ 13 ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಭಾರತ ಮತ್ತು ಯುಎಸ್ ಅಂತಿಮಗೊಳಿಸುತ್ತಿರುವಂತೆಯೇ ಈ ಬೆಳವಣಿಗೆಯಾಗಿದೆ.

ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ನಂತಹ ದೇಶಗಳಿಗೆ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಟ್ರಂಪ್ ಆಡಳಿತ ಈಗಾಗಲೇ ಮಿಲಿಟರಿ ವಿಮಾನವನ್ನು ಬಳಸಿದೆ. ಆದರೆ ಈಗ ಅತ್ಯಂತ ದೂರದ ಪ್ರದೇಶವಾದ ಭಾರತಕ್ಕೂ ಮಿಲಿಟರಿ ವಿಮಾನ ಕಳುಹಿಸಿದೆ.

ಜನವರಿ 27 ರಂದು ಪ್ರಧಾನಿ ಮೋದಿಯವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ, ಅಧ್ಯಕ್ಷ ಟ್ರಂಪ್ ಭಾರತವು ತನ್ನ ನಾಗರಿಕರನ್ನು ಗಡೀಪಾರು ಮಾಡುವ ಬಗ್ಗೆ ಸರಿಯಾದದ್ದನ್ನು ಮಾಡುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅಂದಾಜಿನ ಪ್ರಕಾರ, US ಅಧಿಕಾರಿಗಳು 18,000 ಅಕ್ರಮ ವಲಸಿಗರನ್ನು ಗುರುತಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಈ ವಿಚಾರದಲ್ಲಿ ಅಮೆರಿಕಕ್ಕೆ ಸಹಕಾರ ನೀಡುವುದಾಗಿ ಭಾರತ ಒಲವು ತೋರಿತ್ತು. ಭದ್ರತೆಗೆ ಸಂಬಂಧಿಸಿದ ಒಪ್ಪಂದದಿಂದಾಗ ಅಕ್ರಮ ವಲಸೆಗೆ ಭಾರತೀಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT