ಅಮೃತಸರಕ್ಕೆ ಬಂದಿಳಿದ ಭಾರತೀಯರು 
ದೇಶ

ಅಮೆರಿಕದಿಂದ ಗಡೀಪಾರು: ಅಮೃತಸರಕ್ಕೆ ಬಂದಿಳಿದ 104 ಭಾರತೀಯರು!

ಫೆಬ್ರವರಿ 4 ರಂದು ಬೆಳಗ್ಗೆ3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ಹೊರಟಿದ್ದ C-17 ವಿಮಾನ ಇಂದು ಬೆಳಿಗ್ಗೆ ಅಮೃತಸರಕ್ಕೆ ಬರಬೇಕಾಗಿತ್ತು. ಆದರೆ ಸ್ವಲ ವಿಳಂಬವಾಗಿ ಬಂದಿಳಿದಿದೆ. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರು ಎಂದು ವರದಿಯಾಗಿದೆ.

ಅಮೃತಸರ: ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯರು ಸ್ವದೇಶಕ್ಕೆ ಆಗಮಿಸಿದ್ದಾರೆ. 104 ಅಕ್ರಮ ಭಾರತೀಯ ವಲಸಿಗರಿದ್ದ ಯುಎಸ್ ಮಿಲಿಟರಿ ವಿಮಾನ ಬುಧವಾರ ಮಧ್ಯಾಹ್ನ ಪಂಜಾಬಿನ ಅಮೃತಸರದಲ್ಲಿ ಬಂದಿಳಿಯಿತು.

ಫೆಬ್ರವರಿ 4 ರಂದು ಬೆಳಗ್ಗೆ3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ಹೊರಟಿದ್ದ C-17 ವಿಮಾನ ಇಂದು ಬೆಳಿಗ್ಗೆ ಅಮೃತಸರಕ್ಕೆ ಬರಬೇಕಾಗಿತ್ತು. ಆದರೆ ಸ್ವಲ ವಿಳಂಬವಾಗಿ ಬಂದಿಳಿದಿದೆ. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರು ಎಂದು ವರದಿಯಾಗಿದೆ.

ನವದೆಹಲಿಯಲ್ಲಿರುವ ಯುಎಸ್ ರಾಯಭಾರ ಕಚೇರಿ ಗಡೀಪಾರು ವಿಮಾನದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸದಿದ್ದರೂ, ವಾಷಿಂಗ್ಟನ್ ವಲಸೆ ನೀತಿಗಳನ್ನು ಬಿಗಿಗೊಳಿಸುತ್ತಿದ್ದು, ಅಕ್ರಮವಾಗಿ ದೇಶದಲ್ಲಿರುವ ವ್ಯಕ್ತಿಗಳನ್ನು ಹೊರಗೆ ಕಳುಹಿಸುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ.

ಫೆಬ್ರವರಿ 12 ರಿಂದ 13 ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಭಾರತ ಮತ್ತು ಯುಎಸ್ ಅಂತಿಮಗೊಳಿಸುತ್ತಿರುವಂತೆಯೇ ಈ ಬೆಳವಣಿಗೆಯಾಗಿದೆ.

ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್‌ನಂತಹ ದೇಶಗಳಿಗೆ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಟ್ರಂಪ್ ಆಡಳಿತ ಈಗಾಗಲೇ ಮಿಲಿಟರಿ ವಿಮಾನವನ್ನು ಬಳಸಿದೆ. ಆದರೆ ಈಗ ಅತ್ಯಂತ ದೂರದ ಪ್ರದೇಶವಾದ ಭಾರತಕ್ಕೂ ಮಿಲಿಟರಿ ವಿಮಾನ ಕಳುಹಿಸಿದೆ.

ಜನವರಿ 27 ರಂದು ಪ್ರಧಾನಿ ಮೋದಿಯವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ, ಅಧ್ಯಕ್ಷ ಟ್ರಂಪ್ ಭಾರತವು ತನ್ನ ನಾಗರಿಕರನ್ನು ಗಡೀಪಾರು ಮಾಡುವ ಬಗ್ಗೆ ಸರಿಯಾದದ್ದನ್ನು ಮಾಡುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅಂದಾಜಿನ ಪ್ರಕಾರ, US ಅಧಿಕಾರಿಗಳು 18,000 ಅಕ್ರಮ ವಲಸಿಗರನ್ನು ಗುರುತಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಈ ವಿಚಾರದಲ್ಲಿ ಅಮೆರಿಕಕ್ಕೆ ಸಹಕಾರ ನೀಡುವುದಾಗಿ ಭಾರತ ಒಲವು ತೋರಿತ್ತು. ಭದ್ರತೆಗೆ ಸಂಬಂಧಿಸಿದ ಒಪ್ಪಂದದಿಂದಾಗ ಅಕ್ರಮ ವಲಸೆಗೆ ಭಾರತೀಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT