ರಾಹುಲ್ ಗಾಂಧಿ 
ದೇಶ

ಪ್ರತಿಯೊಂದು ಸಂಸ್ಥೆಯಲ್ಲೂ ದಲಿತರು, ದುರ್ಬಲ ವರ್ಗದವರ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ದಲಿತರು ಮತ್ತು ದುರ್ಬಲ ವರ್ಗಗಳು ದೇಶದ ಪ್ರತಿಯೊಂದು ಸಂಸ್ಥೆಯಲ್ಲಿ ನಾಯಕತ್ವದ ಸ್ಥಾನದಲ್ಲಿರುವ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ...

ಪಾಟ್ನಾ: ದೇಶದ ಪ್ರತಿಯೊಂದು ಸಂಸ್ಥೆಯಲ್ಲೂ ದಲಿತರು ಮತ್ತು ದುರ್ಬಲ ವರ್ಗದವರು ನಾಯಕತ್ವದ ಸ್ಥಾನವನ್ನು ವಹಿಸಿಕೊಳ್ಳುವ ದಿನಕ್ಕಾಗಿ ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಇಂದು ಸ್ವಾತಂತ್ರ್ಯ ಹೋರಾಟಗಾರ ಮತ್ತು ದಲಿತ ಐಕಾನ್ ಜಗಲಾಲ್ ಚೌಧರಿ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ದೇಶಾದ್ಯಂತ ಜಾತಿ ಜನಗಣತಿಯ ಅಗತ್ಯವನ್ನು ಪುನರುಚ್ಚರಿಸಿದರು.

ದಲಿತರು ಮತ್ತು ದೀನದಲಿತರ ಹಕ್ಕುಗಳನ್ನು ಖಾತರಿಪಡಿಸುವ ಸಂವಿಧಾನಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧವಾಗಿವೆ ಎಂದು ಆರೋಪಿಸಿದರು.

"ದೇಶದ ಪ್ರಸ್ತುತ ಅಧಿಕಾರ ವರ್ಗದಲ್ಲಿ ಮತ್ತು ಸಂಸ್ಥೆಗಳಲ್ಲಿ ದಲಿತರು ಮತ್ತು ದೀನದಲಿತರ ಭಾಗವಹಿಸುವಿಕೆ ಇಲ್ಲ... ದಲಿತರು, ಅಲ್ಪಸಂಖ್ಯಾತರು ಮತ್ತು ಸಮಾಜದ ದುರ್ಬಲ ವರ್ಗಗಳ ನಿಖರ ಸಂಖ್ಯೆಯನ್ನು ಗುರುತಿಸಲು ಭಾರತದಾದ್ಯಂತ ಜಾತಿ ಜನಗಣತಿಯ ಅವಶ್ಯಕತೆಯಿದೆ" ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಹೇಳಿದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ರಾಹುಲ್ ಗಾಂಧಿ ಇಂದು ಬೆಳಗ್ಗೆ ಪಾಟ್ನಾಗೆ ಆಗಮಿಸಿದರು.

"ದಲಿತರು ಮತ್ತು ದುರ್ಬಲ ವರ್ಗಗಳು ದೇಶದ ಪ್ರತಿಯೊಂದು ಸಂಸ್ಥೆಯಲ್ಲಿ ನಾಯಕತ್ವದ ಸ್ಥಾನದಲ್ಲಿರುವ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ... ಮತ್ತು ನಾನು ದೀನದಲಿತರ ಪರವಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ" ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT