ಸಂಜಯ್ ಸಿಂಗ್ 
ದೇಶ

AAP ಶಾಸಕರ ಖರೀದಿಗೆ ಬಿಜೆಪಿ ಯತ್ನ, 15 ಕೋಟಿ ರೂ ಆಮಿಷ: ಸಂಜಯ್ ಸಿಂಗ್

ಏಳು ಎಎಪಿ ಶಾಸಕರಿಗೆ ಭಾರತೀಯ ಜನತಾ ಪಕ್ಷದ ನಾಯಕರು ಫೋನ್ ಕರೆ ಮಾಡಿ, ಕೇಸರಿ ಪಕ್ಷಕ್ಕೆ ಸೇರಲು ತಲಾ 15 ಕೋಟಿ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದರು.

ನವದೆಹಲಿ: ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ಅದಕ್ಕು ಮುನ್ನವೇ ಬಿಜೆಪಿ ನಮ್ಮ ಪಕ್ಷದ ಏಳು ಅಭ್ಯರ್ಥಿಗಳನ್ನು ಖರೀದಿಸಲು ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಗುರುವಾರ ಆರೋಪಿಸಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಎಎಪಿ ಶಾಸಕರಿಗೆ ಭಾರತೀಯ ಜನತಾ ಪಕ್ಷದ ನಾಯಕರು ಫೋನ್ ಕರೆ ಮಾಡಿ, ಕೇಸರಿ ಪಕ್ಷಕ್ಕೆ ಸೇರಲು ತಲಾ 15 ಕೋಟಿ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದರು.

"ಕೆಲವರಿಗೆ ಮುಖಾಮುಖಿ ಸಭೆಗಳಲ್ಲಿ ದುಡ್ಡಿನ ಆಮಿಷ ಒಡ್ಡಲಾಗಿದೆ. ಇದು ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಸೋಲನ್ನು ಒಪ್ಪಿಕೊಂಡಿದೆ ಮತ್ತು ಅದಕ್ಕಾಗಿಯೇ ಅದು ಇಂತಹ ಪ್ರಯತ್ನ ಮಾಡುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ" ಎಂದು ಆಪ್ ರಾಜ್ಯಸಭಾ ಸದಸ್ಯ ಹೇಳಿದ್ದಾರೆ.

ಸಿಂಗ್ ಅವರ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು, ಆರೋಪಗಳನ್ನು ಹಿಂಪಡಯಬೇಕು ಮತ್ತು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಬುಧವಾರ ಮತದಾನ ನಡೆದಿದ್ದು, ಫೆಬ್ರವರಿ 8 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ