ಆರೋಪಿ ಅಮಿತ್ ಕುಮಾರ್ ಸರ್ಕಾರ್ 
ದೇಶ

ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.

ಕೊಲ್ಕೋತ್ತಾ: ರಜೆ ಕೊಡಲಿಲ್ಲವೆಂದು ಸರ್ಕಾರಿ ನೌಕರನೊಬ್ಬ ತನ್ನ ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಧಾನ್ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಕೈಯಲ್ಲಿ ರಕ್ತಸಿಕ್ತ ಚಾಕು ಹಿಡಿದುಕೊಂಡು ನಗರದ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವ್ಯಕ್ತಿಯನ್ನು ನೋಡಿ ಜನರು ಭಯಭೀತರಾಗಿದ್ದರು. ಚಾಕುವನ್ನು ಎಸೆಯುವಂತೆ ಅವರು ಕೇಳಿಕೊಳ್ಳುತ್ತಿದ್ದರು.

ಚಾಕು ದಾಳಿಯಲ್ಲಿ ಗಾಯಗೊಂಡವರನ್ನು ಜಯದೇವ್ ಚಕ್ರವರ್ತಿ, ಸಂತನು ಸಹಾ, ಸಾರ್ಥ ಲೇಟ್ ಮತ್ತು ಶೇಖ್ ಸತ್ಬುಲ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆಯಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಆರೋಪಿ ಅಮಿತ್ ಸರ್ಕಾರ್ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಂಚಾರ ಪೊಲೀಸರು ಚಾಕುವನ್ನು ಕೆಳಗೆ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಬಳಿಕ ಬಂಧಿಸಿದ್ದಾರೆ, ಆದೇಶವನ್ನು ಪಾಲಿಸಿದ ಅಮಿತ್ ಕುಮಾರ್ ಪೊಲೀಸರಿಗೆ ಶರಣಾಗಿದ್ದಾನೆ. ಅಮಿತ್ ರಜೆ ಕೇಳಿದ್ದರು, ಆದರೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದಲ್ಲಿರುವ ತಮ್ಮ ಕಚೇರಿಯೊಳಗೆ ತಮ್ಮ ಸಹೋದ್ಯೋಗಗಳೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಚಾಕುವಿನಿಂದ ಇರಿದಿದ್ದಾರೆ. ಅಮಿತ್ ಸರ್ಕಾರ್ ಅವರ ಚಾಕು ದಾಳಿಯ ಸಮಯದಲ್ಲಿ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರಿಗೂ ಗಾಯವಾಗಿದೆ.

ಪೊಲೀಸ್ ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಸಹೋದ್ಯೋಗಿಗಳು ತನ್ನ ತಂದೆಯ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾನೆ, ಇದು ಅವನನ್ನು ಕೋಪಗೊಳಿಸಿತು. ಈ ಪ್ರಕರಣದಲ್ಲಿನ ಆರೋಪಗಳು ಮತ್ತು ಪ್ರತಿ-ಆರೋಪಗಳನ್ನು ತನಿಖಾ ಸಂಸ್ಥೆಗಳು ಇನ್ನೂ ಪರಿಶೀಲಿಸಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT