ಆರೋಪಿ ಅಮಿತ್ ಕುಮಾರ್ ಸರ್ಕಾರ್ 
ದೇಶ

ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.

ಕೊಲ್ಕೋತ್ತಾ: ರಜೆ ಕೊಡಲಿಲ್ಲವೆಂದು ಸರ್ಕಾರಿ ನೌಕರನೊಬ್ಬ ತನ್ನ ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿಧಾನ್ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಕೈಯಲ್ಲಿ ರಕ್ತಸಿಕ್ತ ಚಾಕು ಹಿಡಿದುಕೊಂಡು ನಗರದ ಬೀದಿಗಳಲ್ಲಿ ನಡೆದುಕೊಂಡು ಹೋಗುತ್ತಿದ್ದ ಈ ವ್ಯಕ್ತಿಯನ್ನು ನೋಡಿ ಜನರು ಭಯಭೀತರಾಗಿದ್ದರು. ಚಾಕುವನ್ನು ಎಸೆಯುವಂತೆ ಅವರು ಕೇಳಿಕೊಳ್ಳುತ್ತಿದ್ದರು.

ಚಾಕು ದಾಳಿಯಲ್ಲಿ ಗಾಯಗೊಂಡವರನ್ನು ಜಯದೇವ್ ಚಕ್ರವರ್ತಿ, ಸಂತನು ಸಹಾ, ಸಾರ್ಥ ಲೇಟ್ ಮತ್ತು ಶೇಖ್ ಸತ್ಬುಲ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆಯಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಆರೋಪಿ ಅಮಿತ್ ಸರ್ಕಾರ್ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಂಚಾರ ಪೊಲೀಸರು ಚಾಕುವನ್ನು ಕೆಳಗೆ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ ಬಳಿಕ ಬಂಧಿಸಿದ್ದಾರೆ, ಆದೇಶವನ್ನು ಪಾಲಿಸಿದ ಅಮಿತ್ ಕುಮಾರ್ ಪೊಲೀಸರಿಗೆ ಶರಣಾಗಿದ್ದಾನೆ. ಅಮಿತ್ ರಜೆ ಕೇಳಿದ್ದರು, ಆದರೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದಲ್ಲಿರುವ ತಮ್ಮ ಕಚೇರಿಯೊಳಗೆ ತಮ್ಮ ಸಹೋದ್ಯೋಗಗಳೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಚಾಕುವಿನಿಂದ ಇರಿದಿದ್ದಾರೆ. ಅಮಿತ್ ಸರ್ಕಾರ್ ಅವರ ಚಾಕು ದಾಳಿಯ ಸಮಯದಲ್ಲಿ ಅವರ ಕಚೇರಿಯ ಭದ್ರತಾ ಸಿಬ್ಬಂದಿಯೊಬ್ಬರಿಗೂ ಗಾಯವಾಗಿದೆ.

ಪೊಲೀಸ್ ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಸಹೋದ್ಯೋಗಿಗಳು ತನ್ನ ತಂದೆಯ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾನೆ, ಇದು ಅವನನ್ನು ಕೋಪಗೊಳಿಸಿತು. ಈ ಪ್ರಕರಣದಲ್ಲಿನ ಆರೋಪಗಳು ಮತ್ತು ಪ್ರತಿ-ಆರೋಪಗಳನ್ನು ತನಿಖಾ ಸಂಸ್ಥೆಗಳು ಇನ್ನೂ ಪರಿಶೀಲಿಸಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT