ರಾಹುಲ್ ಗಾಂಧಿ 
ದೇಶ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆ: ರಾಹುಲ್ ಗಾಂಧಿ

ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ತಮ್ಮ ಮತಗಳಿಕೆಯನ್ನು ಉಳಿಸಿಕೊಂಡಿರುವುದರಿಂದ ಸೇರ್ಪಡೆಯಾಗಿರುವ ಹೆಚ್ಚಿನ ಮತದಾರರು ಬಿಜೆಪಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ನಡುವೆ ರಾಜ್ಯದಲ್ಲಿ ಒಟ್ಟು 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಶುಕ್ರವಾರ ಕಾಂಗ್ರೆಸ್, ಶಿವಸೇನೆ-ಯುಬಿಟಿ ಮತ್ತು ಎನ್‌ಸಿಪಿ-ಎಸ್‌ಎಸ್ ಆರೋಪಿಸಿವೆ.

ಇಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಸೇರ್ಪಡೆಯಾದ ಒಟ್ಟು ಮತದಾರರ ಸಂಖ್ಯೆ ಹಿಮಾಚಲ ಪ್ರದೇಶದಂತಹ ರಾಜ್ಯದ ಜನಸಂಖ್ಯೆಗೆ ಸಮನಾಗಿದೆ. ಈ ಬಗ್ಗೆ ಮತದಾರರ ಪಟ್ಟಿಯನ್ನು ಒದಗಿಸಬೇಕು ಮತ್ತು ಈ ವಿಷಯದ ಬಗ್ಗೆ ಸ್ಪಷ್ಟ ಚಿತ್ರಣ ನೀಡಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ತಮ್ಮ ಮತಗಳಿಕೆಯನ್ನು ಉಳಿಸಿಕೊಂಡಿರುವುದರಿಂದ ಸೇರ್ಪಡೆಯಾಗಿರುವ ಹೆಚ್ಚಿನ ಮತದಾರರು ಬಿಜೆಪಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಎನ್‌ಸಿಪಿ-ಎಸ್‌ಎಸ್‌ನ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ ಸಂಜಯ್ ರಾವುತ್ ಜೊತೆಗಿದ್ದ ರಾಹುಲ್, ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿ ಇದ್ದರೆ, ರಾಜ್ಯದ ಮತದಾರರ ಜನಸಂಖ್ಯೆ ಮಾತ್ರ 9.7 ಕೋಟಿ ಇದೆ. ಮಹಾರಾಷ್ಟ್ರದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ಐದು ತಿಂಗಳ ಅಂತರದಲ್ಲಿ 39 ಲಕ್ಷ ಮತದಾರರು ಮಹಾರಾಷ್ಟ್ರದಲ್ಲಿ ಸೇರ್ಪಡೆಗೊಂಡರೆ, 2019 ಮತ್ತು 2024ರ ನಡುವಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 32 ಲಕ್ಷ ಮತಗಳು ಸೇರ್ಪಡೆಗೊಂಡಿವೆ. ಮಹಾರಾಷ್ಟ್ರದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗವು ನೀಡದಿದ್ದರೆ, ಅದು ಗಂಭೀರ ಪ್ರಶ್ನೆಯನ್ನು ಮುಂದಿಡುತ್ತದೆ ಎಂದು ಅವರು ಹೇಳಿದರು.

ನಾವು ಈಗ ಸಂವಿಧಾನದ ಸಂಪೂರ್ಣ ನಾಶದತ್ತ ಸಾಗುತ್ತಿದ್ದೇವೆ. ಆದರೆ, ನಾವು ಸಂವಿಧಾನವನ್ನು ರಕ್ಷಿಸುವ ವ್ಯವಹಾರದಲ್ಲಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮವಾಗಿ ನ್ಯಾಯಾಂಗದ ಬಾಗಿಲು ತಟ್ಟಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

'ನಮಗೆ ಮತದಾರರ ಪಟ್ಟಿಗಳನ್ನು ನೀಡಲು ಚುನಾವಣಾ ಆಯೋಗವು ಸಿದ್ಧವಾಗಿಲ್ಲದಿರುವುದು ನನಗೆ ಆಶ್ಚರ್ಯಕರ ಉಂಟುಮಾಡಿದೆ. ಇದಕ್ಕೆ ಕಾರಣವೆಂದರೆ, ಅಲ್ಲಿ ಏನೋ ತಪ್ಪಾಗಿದೆ ಮತ್ತು ಆ ತಪ್ಪಿನ ಬಗ್ಗೆ ಆಯೋಗಕ್ಕೆ ತಿಳಿದಿದೆ ಎಂದು ರಾಹುಲ್ ಹೇಳಿದರು.

ಚುನಾವಣಾ ಆಯೋಗ ಬದುಕಿದೆ ಮತ್ತು ಸತ್ತಿಲ್ಲ ಎಂದಾದರೆ ರಾಹುಲ್ ಗಾಂಧಿ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವು ಸರ್ಕಾರದ ಗುಲಾಮ ಎಂದು ಅರ್ಥೈಸಲಾಗುತ್ತದೆ. ಚುನಾವಣಾ ಆಯೋಗ ಪಾರದರ್ಶಕತೆ ತರಬೇಕು ಎಂದು ಸಂಜಯ್ ರಾವುತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT