ಚುನಾವಣಾ ಆಯೋಗ (ಸಂಗ್ರಹ ಚಿತ್ರ) online desk
ದೇಶ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ- ರಾಹುಲ್ ಗಾಂಧಿ ಆರೋಪ; ಸಂಪೂರ್ಣ ವಾಸ್ತವ ವಿಷಯಗಳೊಂದಿಗೆ ಪ್ರತಿಕ್ರಿಯಿಸುತ್ತೇವೆ- ಚುನಾವಣಾ ಆಯೋಗ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚಿನ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ ಹಿನ್ನೆಲೆಯಲ್ಲಿ ಸಂಪೂರ್ಣ ವಾಸ್ತವಾಂಶಗಳೊಂದಿಗೆ ಲಿಖಿತವಾಗಿ ಈ ಆರೋಪಕ್ಕೆ ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪ ಮಾಡಿದ ಕೂಡಲೇ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, 'ರಾಜಕೀಯ ಪಕ್ಷಗಳನ್ನು ಆದ್ಯತೆಯ ಪಾಲುದಾರರು ಎಂದು ಇಸಿಐ ಪರಿಗಣಿಸುತ್ತದೆ. ಸಹಜವಾಗಿ ಮತದಾರರು ಕೂಡ ಪ್ರಧಾನರಾಗಿದ್ದಾರೆ ಮತ್ತು ರಾಜಕೀಯ ಪಕ್ಷಗಳಿಂದ ಬರುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗ ಗೌರವಿಸುತ್ತದೆ' ಎಂದಿದೆ.

'ದೇಶದಾದ್ಯಂತ ಏಕರೂಪವಾಗಿ ಅಳವಡಿಸಿಕೊಂಡಿರುವ ಸಂಪೂರ್ಣ ವಾಸ್ತವಿಕ ಮತ್ತು ಕಾರ್ಯವಿಧಾನ ಸಂಪೂರ್ಣ ಮಾಹಿತಿಯೊಂದಿಗೆ ಆಯೋಗವು ಲಿಖಿತವಾಗಿ ಪ್ರತಿಕ್ರಿಯಿಸುತ್ತದೆ' ಎಂದು ಅದು ರಾಹುಲ್ ಗಾಂಧಿಯನ್ನು ಹೆಸರಿಸದೆ ಅಥವಾ ಅವರ ಆರೋಪಗಳನ್ನು ಉಲ್ಲೇಖಿಸದೆ ಹೇಳಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 32 ಲಕ್ಷ ಮತದಾರರು ಸೇರ್ಪಡೆಯಾಗಿದ್ದರೆ, ಲೋಕಸಭೆ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ