ಚುನಾವಣಾ ಆಯೋಗ (ಸಂಗ್ರಹ ಚಿತ್ರ) online desk
ದೇಶ

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ- ರಾಹುಲ್ ಗಾಂಧಿ ಆರೋಪ; ಸಂಪೂರ್ಣ ವಾಸ್ತವ ವಿಷಯಗಳೊಂದಿಗೆ ಪ್ರತಿಕ್ರಿಯಿಸುತ್ತೇವೆ- ಚುನಾವಣಾ ಆಯೋಗ

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚಿನ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ ಹಿನ್ನೆಲೆಯಲ್ಲಿ ಸಂಪೂರ್ಣ ವಾಸ್ತವಾಂಶಗಳೊಂದಿಗೆ ಲಿಖಿತವಾಗಿ ಈ ಆರೋಪಕ್ಕೆ ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪ ಮಾಡಿದ ಕೂಡಲೇ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, 'ರಾಜಕೀಯ ಪಕ್ಷಗಳನ್ನು ಆದ್ಯತೆಯ ಪಾಲುದಾರರು ಎಂದು ಇಸಿಐ ಪರಿಗಣಿಸುತ್ತದೆ. ಸಹಜವಾಗಿ ಮತದಾರರು ಕೂಡ ಪ್ರಧಾನರಾಗಿದ್ದಾರೆ ಮತ್ತು ರಾಜಕೀಯ ಪಕ್ಷಗಳಿಂದ ಬರುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗ ಗೌರವಿಸುತ್ತದೆ' ಎಂದಿದೆ.

'ದೇಶದಾದ್ಯಂತ ಏಕರೂಪವಾಗಿ ಅಳವಡಿಸಿಕೊಂಡಿರುವ ಸಂಪೂರ್ಣ ವಾಸ್ತವಿಕ ಮತ್ತು ಕಾರ್ಯವಿಧಾನ ಸಂಪೂರ್ಣ ಮಾಹಿತಿಯೊಂದಿಗೆ ಆಯೋಗವು ಲಿಖಿತವಾಗಿ ಪ್ರತಿಕ್ರಿಯಿಸುತ್ತದೆ' ಎಂದು ಅದು ರಾಹುಲ್ ಗಾಂಧಿಯನ್ನು ಹೆಸರಿಸದೆ ಅಥವಾ ಅವರ ಆರೋಪಗಳನ್ನು ಉಲ್ಲೇಖಿಸದೆ ಹೇಳಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 32 ಲಕ್ಷ ಮತದಾರರು ಸೇರ್ಪಡೆಯಾಗಿದ್ದರೆ, ಲೋಕಸಭೆ ಚುನಾವಣೆಯ ನಂತರ ಕೇವಲ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT