ಮಲ್ಲಿಕಾರ್ಜುನ ಖರ್ಗೆ 
ದೇಶ

ಆಡಳಿತ ವಿರೋಧಿ ಅಲೆ ಸೃಷ್ಟಿಸಿದೆವು, ಆದರೆ ಜನಾದೇಶ ಬರಲಿಲ್ಲ: ದೆಹಲಿ ಫಲಿತಾಂಶದ ಬಗ್ಗೆ ಖರ್ಗೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ.

ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ. ಆದರೆ ಸಾರ್ವಜನಿಕರು ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು.

"ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ" ಎಂದು ಅವರು ಖರ್ಗೆ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

"ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಕೂಲ ಸಂದರ್ಭಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಆದರೆ ಇನ್ನೂ ಹೆಚ್ಚಿನ ಶ್ರಮ ಮತ್ತು ಹೋರಾಟದ ಅಗತ್ಯವಿದೆ" ಎಂದು ಅವರು ಹೇಳಿದರು.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಸತತ ಮೂರನೇ ಬಾರಿ ಶೂನ್ಯ ಸಂಪಾದಿಸಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾಯಿತು ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT