ಅರವಿಂದ್ ಕೇಜ್ರಿವಾಲ್- ಅಣ್ಣ ಹಜಾರೆ online desk
ದೇಶ

Delhi Election results 2025: AAP ಸೋಲು; Kejriwal ಚಾರಿತ್ರ್ಯದ ಬಗ್ಗೆ ಮಾತಾಡ್ತಾರೆ, ಆದರೆ... ಶಿಷ್ಯನಿಗೆ Anna Hazare ಕ್ಲಾಸ್!

ಒಂದು ಕಾಲದಲ್ಲಿ ಕೇಜ್ರಿವಾಲ್ ಗೆ ಮಾರ್ಗದರ್ಶಕರಾಗಿದ್ದ ಅಣ್ಣ ಹಜಾರೆ (Anna Hajare) ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸತತ 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಗಿ ವಿಪಕ್ಷಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

20 ವರ್ಷಗಳಿಂದ ಅಧಿಕಾರದ ಅಜ್ಞಾತವಾಸ ಅನುಭವಿಸಿದ್ದ ಬಿಜೆಪಿ ಈಗ 40ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೇರಲು ಸಜ್ಜಾಗಿದೆ.

ಒಂದು ಕಾಲದಲ್ಲಿ ಕೇಜ್ರಿವಾಲ್ ಗೆ ಮಾರ್ಗದರ್ಶಕರಾಗಿದ್ದ ಅಣ್ಣ ಹಜಾರೆ (Anna Hajare) ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

"ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ಉತ್ತಮವಾದ ಚಾರಿತ್ರ್ಯ ಇರಬೇಕು, ಉತ್ತಮ ಚಿಂತನೆಗಳು, ಐಡಿಯಾಗಳಿರಬೇಕು ಎಂದು ನಾನು ಈ ಹಿಂದಿನಿಂದ ಹೇಳುತ್ತಾ ಬಂದಿದ್ದೇನೆ. ಆದರೆ ಅದನ್ನು ಆಮ್ ಆದ್ಮಿ ಪಕ್ಷ ಅರ್ಥ ಮಾಡಿಕೊಳ್ಳಲಿಲ್ಲ.

ಕೇಜ್ರಿವಾಲ್ ಮದ್ಯ ಮತ್ತು ಹಣದಲ್ಲಿ ಸಿಲುಕಿಕೊಂಡರು, ಇದೇ ಕಾರಣದಿಂದಾಗಿ ಅವರ ಚಾರಿತ್ರ್ಯಕ್ಕೆ ಕಳಂಕ ಉಂಟಾಯಿತು. ಪರಿಣಾಮ ಆಮ್ ಆದ್ಮಿ ಪಕ್ಷ ಈಗ ಅಧಿಕಾರ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಳ್ಳೆಯ ಚಾರಿತ್ರ್ಯದ ಬಗ್ಗೆ ಮಾತನಾಡುತ್ತಿದ್ದರು ಆದರೆ ಸ್ವತಃ ಅವರೇ ಮದ್ಯದ ಲಾಬಿಯಲ್ಲಿ ಅವರೇ ಸಿಲುಕಿದ್ದನ್ನು ಜನತೆ ನೋಡಿದ್ದರು. ರಾಜಕೀಯದಲ್ಲಿ ಆರೋಪಗಳು ಸಹಜ ಆದರೆ ಆರೋಪ ಎದುರಿಸುವವರು ತಾನು ನಿರಪರಾಧಿ ಎಂಬುದನ್ನು ಸಾಬೀತುಪಡಿಸಬೇಕು, ಸತ್ಯ ಎಂದಿಗೂ ಸತ್ಯವಾಗಿರುತ್ತದೆ. ಹಿಂದೊಮೆ ಪಕ್ಷ ರಚನೆಯ ಸಭೆ ನಡೆದಾಗ ನಾನು ಆ ಪಕ್ಷದ ಭಾಗವಾಗುವುದಿಲ್ಲ ಎಂದು ನಿರ್ಧರಿಸಿದ್ದೆ. ಅಂದಿನಿಂದ ಇಂದಿನವರೆಗೂ ನಾನು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದೇನೆ ಎಂದು ಅಣ್ಣ ಹಜಾರೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

'ನರಕಾಸುರ' ಮೋದಿಯನ್ನು ಕೊಲ್ಲಬೇಕು': ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ, ಚಪ್ಪಾಳೆ ತಟ್ಟಿದ ಮಹಿಳೆಯರು, Video

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ...: ಸಾರ್ವಜನಿಕ ಸ್ಥಳದಲ್ಲಾಗಿದ್ದ ಕರಾಳ ಘಟನೆ ತೆರದಿಟ್ಟ ನಟಿ Girija Oak

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

SCROLL FOR NEXT