ಅರವಿಂದ್ ಕೇಜ್ರಿವಾಲ್-ನರೇಂದ್ರ ಮೋದಿ TNIE
ದೇಶ

27 ವರ್ಷಗಳ ಬಳಿಕ BJP ಪ್ರಚಂಡ ಗೆಲುವು: ದೆಹಲಿಯಲ್ಲಿ ಅಭಿವೃದ್ಧಿ ಗೆದ್ದಿದೆ- ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ!

ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು. ಐತಿಹಾಸಿಕ ಗೆಲುವನ್ನು ನೀಡಿದ್ದಕ್ಕಾಗಿ ದೆಹಲಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು ಮತ್ತು ಅಭಿನಂದನೆಗಳು.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಮಾನವಶಕ್ತಿಯೇ ಸರ್ವೋಚ್ಚ ಎಂದು ಪ್ರಧಾನಿ ಮೋದಿ ಹೇಳಿದರು. ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು. ಐತಿಹಾಸಿಕ ಗೆಲುವನ್ನು ನೀಡಿದ್ದಕ್ಕಾಗಿ ದೆಹಲಿಯ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು ಮತ್ತು ಅಭಿನಂದನೆಗಳು. ನೀವು ನನಗೆ ನೀಡಿರುವ ಹೇರಳವಾದ ಆಶೀರ್ವಾದ ಮತ್ತು ಪ್ರೀತಿಗಾಗಿ ನಾನು ನಿಮ್ಮೆಲ್ಲರಿಗೂ ತುಂಬಾ ಕೃತಜ್ಞನಾಗಿದ್ದೇನೆ.

ದೆಹಲಿಯ ಸರ್ವತೋಮುಖ ಅಭಿವೃದ್ಧಿ ಮತ್ತು ಇಲ್ಲಿನ ಜನರ ಜೀವನವನ್ನು ಉತ್ತಮಗೊಳಿಸಲು ತಮ್ಮ ಪಕ್ಷದ ಸರ್ಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಈ ಅದ್ಭುತ ಫಲಿತಾಂಶವನ್ನು ಸಾಧಿಸಿದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಪ್ರಧಾನಿ ಹೇಳಿದರು. ನಾವು ಇನ್ನೂ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಅದ್ಭುತ ಜನರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಟ್ವೀಟಿಸಿದ್ದಾರೆ.

ದೆಹಲಿಯ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಇಲ್ಲಿನ ಜನರ ಜೀವನವನ್ನು ಉತ್ತಮಗೊಳಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದು ಪ್ರಧಾನಿ ಮೋದಿ ಜನರಿಗೆ ಭರವಸೆ ನೀಡಿದರು. ಇದು ನಮ್ಮ ಗ್ಯಾರಂಟಿ. ಇದರೊಂದಿಗೆ, ಅಭಿವೃದ್ಧಿ ಹೊಂದಿದ ಭಾರತವನ್ನು ಸೃಷ್ಟಿಸುವಲ್ಲಿ ದೆಹಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ. ಈ ಬೃಹತ್ ಜನಾದೇಶಕ್ಕಾಗಿ ಹಗಲಿರುಳು ಶ್ರಮಿಸಿದ ನನ್ನ ಎಲ್ಲಾ ಬಿಜೆಪಿ ಕಾರ್ಯಕರ್ತರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಪ್ರಧಾನಿ ಹೇಳಿದರು. ಈಗ ನಾವು ನಮ್ಮ ದೆಹಲಿಯವರಿಗೆ ಇನ್ನಷ್ಟು ಬಲವಾಗಿ ಸೇವೆ ಸಲ್ಲಿಸಲು ಸಮರ್ಪಿತರಾಗಿರುತ್ತೇವೆ.

27 ವರ್ಷಗಳ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋತಿದೆ. ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಸೋಲನ್ನು ಒಪ್ಪಿಕೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರೇ ತಮ್ಮ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇನ್ನು ಮನೀಶ್ ಸಿಸೋಡಿಯಾ ಕೂಡ ಸೋಲನ್ನು ಎದುರಿಸಬೇಕಾಯಿತು. ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಆಡಳಿತ ಪಕ್ಷದ ಹಲವಾರು ಪ್ರಮುಖ ನಾಯಕರು ಚುನಾವಣೆಯಲ್ಲಿ ಸೋತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್