ವಿ.ಮುರಳೀಧರನ್,ಸಿಎಂ ಪಿಣರಾಯಿ ವಿಜಯನ್ ಸಾಂದರ್ಭಿಕ ಚಿತ್ರ 
ದೇಶ

ಇಂದು ದೆಹಲಿ, ನಾಳೆ ಕೇರಳ: ಪಿಣರಾಯಿಗೆ ಭವಿಷ್ಯ ಹೇಳಿದ ಬಿಜೆಪಿ ನಾಯಕ!

ಇಂದು ದೆಹಲಿ, ನಾಳೆ ಕೇರಳದಲ್ಲಿಯೂ ಗೆಲ್ಲುತ್ತೇವೆ. ರಾಷ್ಟ್ರ ರಾಜಧಾನಿಯಲ್ಲಿನ ಚುನಾವಣಾ ಫಲಿತಾಂಶವು ಭ್ರಷ್ಟರಿಗೆ ಕಾದಿರುವ ಭವಿಷ್ಯದ ಮುನ್ಸೂಚನೆಯಾಗಿದೆ.

ತಿರುವನಂತಪುರ: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ಬಿಜೆಪಿ ಸಂಭ್ರಮದ ಅಲೆಯಲ್ಲಿ ತೇಲುತ್ತಿರುವಂತೆಯೇ, ಕೇರಳದಲ್ಲಿಯೂ ಇದೇ ರೀತಿಯ ಫಲಿತಾಂಶಕ್ಕೆ ಸಿಎಂ ಪಿಣರಾಯಿ ವಿಜಯನ್ ಸಿದ್ಧರಾಗಿರುವಂತೆ ಬಿಜೆಪಿ ನಾಯಕ ವಿ.ಮುರಳೀಧರನ್ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ಇಂದು ದೆಹಲಿ, ನಾಳೆ ಕೇರಳದಲ್ಲಿಯೂ ಗೆಲ್ಲುತ್ತೇವೆ. ರಾಷ್ಟ್ರ ರಾಜಧಾನಿಯಲ್ಲಿನ ಚುನಾವಣಾ ಫಲಿತಾಂಶವು ಭ್ರಷ್ಟರಿಗೆ ಕಾದಿರುವ ಭವಿಷ್ಯದ ಮುನ್ಸೂಚನೆಯಾಗಿದೆ ಎಂದರು.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮದ್ಯ ಹಗರಣ ಮತ್ತಿತರ ಭ್ರಷ್ಟಾಚಾರದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ತನ್ನ ಎದುರಾಳಿಗಳು ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಅವರ ಹೇಳಿಕೆಯನ್ನು ಜನರು ನಂಬಲಿಲ್ಲ. ಭ್ರಷ್ಟ ಜನರನ್ನು ಅಧಿಕಾರಿದಿಂದ ಜನರು ಕೆಳಗೆ ಇಳಿಸಲಿದ್ದಾರೆ ಎಂಬ ಸಂದೇಶವನ್ನು ಚುನಾವಣಾ ಫಲಿತಾಂಶ ನೀಡಿದೆ. ಇದು ಭ್ರಷ್ಟಾಚಾರ ಮತ್ತು ದುರಂಹಕಾರದ ವಿರುದ್ಧದ ಗೆಲುವು ಆಗಿದೆ ಎಂದು ತಿಸಿದರು.

ಉತ್ತರ ಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಆಡಳಿತವನ್ನು ನೋಡಿ ದೆಹಲಿಯ ಜನರು 'ಡಬಲ್ ಇಂಜಿನ್' ಸರ್ಕಾರವನ್ನು ಬಯಸಿದ್ದಾರೆ. ವಿಜಯನ್ ಅವರಿಗೆ ಕೇಜ್ರಿವಾಲ್ ಆಪ್ತರಾಗಿದ್ದರು. ದೆಹಲಿ ಮದ್ಯ ಹಗರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯೊಬ್ಬರಿಗೆ ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮದ್ಯ ಘಟಕ ಸ್ಥಾಪಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ದೆಹಲಿ ಚುನಾವಣಾ ಫಲಿತಾಂಶ ಪಿಣರಾಯಿ ವಿಜಯನ್‌ಗೆ ಪಾಠವಾಗಬೇಕು. ಕೇರಳದಲ್ಲಿಯೂ ಮುಂದೆ ಇದೇ ರೀತಿ ಆಗಲಿದೆ ಎಂದು ಅವರು ಹೇಳಿದರು.

ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ ದೆಹಲಿ ವಿಧಾನಸಭೆಯ 70 ಸ್ಥಾನಗಳಲ್ಲಿ ಬಿಜೆಪಿ 40 ಸ್ಥಾನಗಳನ್ನು ಮತ್ತು ಎಎಪಿ 19 ಸ್ಥಾನಗಳನ್ನು ಗೆದ್ದಿದೆ. 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT