ಅತಿಶಿ 
ದೇಶ

ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ: ದೆಹಲಿ ಸಿಎಂ ಅತಿಶಿ

ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ತಮ್ಮ ಕ್ಷೇತ್ರದ ಜನರು ತಮ್ಮ ಮೇಲೆ "ವಿಶ್ವಾಸವಿಟ್ಟಿದ್ದಕ್ಕಾಗಿ" ಧನ್ಯವಾದ ಅರ್ಪಿಸಿದರು.

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ "ಹಿನ್ನಡೆ"ಯಾಗಿದೆ ಎಂದು ಒಪ್ಪಿಕೊಂಡ ದೆಹಲಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ ಅವರು, ಮೂರು ದಶಕಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಗೆಲುವು ಸಾಧಿಸಿದ ಭಾರತೀಯ ಜನತಾ ಪಕ್ಷ(ಬಿಜೆಪಿ) ವಿರುದ್ಧ "ಯುದ್ಧ" ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ತಮ್ಮ ಕ್ಷೇತ್ರದ ಜನರು ತಮ್ಮ ಮೇಲೆ "ವಿಶ್ವಾಸವಿಟ್ಟಿದ್ದಕ್ಕಾಗಿ" ಧನ್ಯವಾದ ಅರ್ಪಿಸಿದರು.

"ನಾವು ಜನರ ಆದೇಶವನ್ನು ಒಪ್ಪಿಕೊಳ್ಳುತ್ತೇವೆ. ನಾನು ಗೆದ್ದಿದ್ದೇನೆ. ಆದರೆ ಇದು ಸಂಭ್ರಮಿಸುವ ಸಮಯವಲ್ಲ. ಬಿಜೆಪಿ ಸರ್ವಾಧಿಕಾರದ ವಿರುದ್ಧ 'ಯುದ್ಧ' ಮುಂದುವರಿಸುವ ಸಮಯ" ಎಂದರು.

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿ ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್