ಅತಿಶಿ 
ದೇಶ

ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ: ದೆಹಲಿ ಸಿಎಂ ಅತಿಶಿ

ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ತಮ್ಮ ಕ್ಷೇತ್ರದ ಜನರು ತಮ್ಮ ಮೇಲೆ "ವಿಶ್ವಾಸವಿಟ್ಟಿದ್ದಕ್ಕಾಗಿ" ಧನ್ಯವಾದ ಅರ್ಪಿಸಿದರು.

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ಕ್ಕೆ "ಹಿನ್ನಡೆ"ಯಾಗಿದೆ ಎಂದು ಒಪ್ಪಿಕೊಂಡ ದೆಹಲಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ ಅವರು, ಮೂರು ದಶಕಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಗೆಲುವು ಸಾಧಿಸಿದ ಭಾರತೀಯ ಜನತಾ ಪಕ್ಷ(ಬಿಜೆಪಿ) ವಿರುದ್ಧ "ಯುದ್ಧ" ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ತಮ್ಮ ಕ್ಷೇತ್ರದ ಜನರು ತಮ್ಮ ಮೇಲೆ "ವಿಶ್ವಾಸವಿಟ್ಟಿದ್ದಕ್ಕಾಗಿ" ಧನ್ಯವಾದ ಅರ್ಪಿಸಿದರು.

"ನಾವು ಜನರ ಆದೇಶವನ್ನು ಒಪ್ಪಿಕೊಳ್ಳುತ್ತೇವೆ. ನಾನು ಗೆದ್ದಿದ್ದೇನೆ. ಆದರೆ ಇದು ಸಂಭ್ರಮಿಸುವ ಸಮಯವಲ್ಲ. ಬಿಜೆಪಿ ಸರ್ವಾಧಿಕಾರದ ವಿರುದ್ಧ 'ಯುದ್ಧ' ಮುಂದುವರಿಸುವ ಸಮಯ" ಎಂದರು.

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿ ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT