ಮಮತಾ ಕುಲಕರ್ಣಿ 
ದೇಶ

ಮಹಾಮಂಡಲೇಶ್ವರ ಸ್ಥಾನಕ್ಕೆ ಮಮತಾ ಕುಲಕರ್ಣಿ ರಾಜೀನಾಮೆ! ಹೇಳಿದ್ದು ಹೀಗೆ...

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿ ವೈರಲ್ ಆದ ನಂತರ ಕಿನ್ನಾರ ಅಖಾಡದದ ಮಹಾಮಂಡಲೇಶ್ವರ ಆದರು.

ಮುಂಬೈ: ಇತ್ತೀಚಿಗೆ ಬಾಲಿವುಡ್ ನ ಗ್ಲಾಮರ್ ಲೋಕಕ್ಕೆ ವಿದಾಯ ಹೇಳಿ ಸನ್ಯಾಸ್ಯತ್ವ ಸ್ವೀಕರಿಸಿದ್ದ ಮಮತಾ ಕುಲಕರ್ಣಿ ಇದೀಗ ಸಿಕ್ಕಾಪಟ್ಟೆ ಸುದ್ದಿ ಆಗ್ತಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿ ವೈರಲ್ ಆದ ನಂತರ ಕಿನ್ನಾರ ಅಖಾಡದದ ಮಹಾಮಂಡಲೇಶ್ವರ ಆದರು. ಈ ಅತ್ಯುನ್ನತ ಸ್ಥಾನವನ್ನು ಪಡೆದಿದ್ದರಿಂದ ಅವರನ್ನು ಅನೇಕ ಜನರು ಮತ್ತು ಭಕ್ತರು ವಿರೋಧಿಸಿದರು. ಇದರಿಂದ ಮನನೊಂದ ಅವರು ಇದೀಗ ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮೀ ನಾರಾಯಣ ತ್ರಿಪಾಠಿ ಮತ್ತು ಕಿನ್ನರ ಅಖಾಡ ಸಂಸ್ಥಾಪಕ ರಿಷಿ ಅಜಯ್ ದಾಸ್ ನಡುವಿನ ಜಗಳವೇ ಇದಕ್ಕೆ ಕಾರಣವಾಗಿದೆ.

ಮಮತಾ ಕುಲಕರ್ಣಿ ಹೇಳಿಕೆ: ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಮಮತಾ ಕುಲಕರ್ಣಿ, ಮಮತಾ ನಂದಗಿರಿ ಆದನ ನಾನು, ಮಹಾಮಂಡಲೇಶ್ವರ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಎರಡೂ ಗುಂಪಿನ ನಡುವೆ ನಡೆಯುತ್ತಿರುವ ಜಗಳ ಸರಿಯಲ್ಲ, 25 ವರ್ಷಗಳಿಂದ ನಾನು ಸಾಧ್ವಿಯಾಗಿದ್ದೆ.ಹಾಗೆಯೇ ಉಳಿಯುತ್ತೇನೆ. ಮಹಾಮಂಡಲೇಶ್ವರನಾಗಿ ನನಗೆ ಸಿಕ್ಕಿದ ಗೌರವವು 25 ವರ್ಷಗಳ ಕಾಲ ಈಜು ಕಲಿತು ನಂತರ ಅದನ್ನು ಮಕ್ಕಳಿಗೆ ಕಲಿಸುವಂತೆ ಆಗಿದೆ ಎಂದು ಹೇಳಿದ್ದಾರೆ.

ನನ್ನನ್ನು ಮಹಾಮಂಡಲೇಶ್ವರನಾಗಿ ನೇಮಿಸಿದ ನಂತರ ಆಕ್ರೋಶ ವ್ಯಕ್ತವಾಗುತ್ತಿದೆ. 25 ವರ್ಷಗಳ ಹಿಂದೆ ಬಾಲಿವುಡ್ ತೊರೆದು ಎಲ್ಲದರಿಂದ ದೂರ ಉಳಿದಿದ್ದೆ. ನಾನು ಮಾಡುವ ಪ್ರತಿಯೊಂದಕ್ಕೂ ಜನರು ಹಲವಾರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಮಹಾಮಂಡಳೇಶ್ವರರಾಗಿ ನೇಮಕಗೊಂಡಿದ್ದಕ್ಕೆ ಬಹಳಷ್ಟು ಮಂದಿಗೆ ತೊಂದರೆ ಆಗಿರುವುದನ್ನು ಗಮನಿಸಿದ್ದೇನೆ. ನಾನು ಯಾವುದೇ ಕೈಲಾಸ ಅಥವಾ ಮಾನಸ ಸರೋವರಕ್ಕೆ ಹೋಗಬೇಕಾಗಿಲ್ಲ, ಕಳೆದ 25 ವರ್ಷಗಳ ತಪಸ್ಸಿನಿಂದ ನನ್ನ ಮುಂದೆ ಬ್ರಹ್ಮಾಂಡವಿದೆ ಎಂದು ಅವರುತಿಳಿಸಿದ್ದಾರೆ.

1990 ರ ದಶಕದ ಪ್ರಸಿದ್ಧ ಬಾಲಿವುಡ್ ನಟಿ ಮಮತಾ, 2000 ರ ದಶಕದ ಆರಂಭದಲ್ಲಿ ಚಿತ್ರೋದ್ಯಮದಿಂದ ದೂರವಿರಲು ನಿರ್ಧರಿಸಿದ್ದರು. ಅವರು ಭಾರತಕ್ಕೆ ಮರಳುವ ಅಥವಾ ಆಧ್ಯಾತ್ಮಿಕ ಕ್ಷೇತ್ರಕ್ಕೆ ತೆರಳುವ ಅವರ ಹಠಾತ್ ನಿರ್ಧಾರವು ಅನೇಕ ಕಳವಳಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT