ಪಂಜಾಬ್ ಸಿಎಂ ಭಗವಂತ್ ಮಾನ್ 
ದೇಶ

'ಎಎಪಿಯಲ್ಲಿ ಎಲ್ಲವೂ ಚೆನ್ನಾಗಿದೆ': ಕೇಜ್ರಿವಾಲ್, ಶಾಸಕರೊಂದಿಗೆ ಸಭೆ ನಂತರ ಪಂಜಾಬ್ ಸಿಎಂ ಮಾನ್

ಚುನಾವಣೆಯ ಸಮಯದಲ್ಲಿ ಶಾಸಕರ ಪ್ರಯತ್ನಗಳಿಗೆ ಧನ್ಯವಾದ ಹೇಳಲು ಕೇಜ್ರಿವಾಲ್ ಈ ಸಭೆಯನ್ನು ಕರೆದಿದ್ದರು ಎಂದು ಪಂಜಾಬ್ ಮುಖ್ಯಮಂತ್ರಿ ಮಾನ್ ಹೇಳಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ ಎಂಬ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಪಕ್ಷದಲ್ಲಿ "ಎಲ್ಲವೂ ಚೆನ್ನಾಗಿದೆ" ಎಂದು ಮಂಗಳವಾರ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ, ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್‌ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿದ ನಂತರ ಮಾನ್ ಈ ಹೇಳಿಕೆ ನೀಡಿದ್ದಾರೆ.

ಚುನಾವಣೆಯ ಸಮಯದಲ್ಲಿ ಶಾಸಕರ ಪ್ರಯತ್ನಗಳಿಗೆ ಧನ್ಯವಾದ ಹೇಳಲು ಕೇಜ್ರಿವಾಲ್ ಈ ಸಭೆಯನ್ನು ಕರೆದಿದ್ದರು ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದಾರೆ.

"ಪಂಜಾಬ್‌ನಲ್ಲಿ ಎಎಪಿ ಸರ್ಕಾರವು ಶಿಕ್ಷಣ ಅಥವಾ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸದಾ ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ" ಎಂದು ಮಾನ್ ತಿಳಿಸಿದರು.

"ಗೆಲುವು ಮತ್ತು ಸೋಲು ಚುನಾವಣೆಯ ಒಂದು ಭಾಗವಾಗಿದೆ. ದೆಹಲಿಯ ಜನ ಅವರಿಗಾಗಿ ಕೆಲಸ ಮಾಡಿದ ವ್ಯಕ್ತಿಯಾಗಿ ನೆನಪಿಸಿಕೊಳ್ಳುತ್ತಾರೆ" ಎಂದು ಅವರು ಹೇಳಿದರು.

ಪಂಜಾಬ್‌ನಲ್ಲಿ ಪಕ್ಷವು ಇನ್ನೂ ಎರಡು ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ. ನಾವು ಪಂಜಾಬ್‌ನಲ್ಲಿ ದೆಹಲಿಯ ಅನುಭವವನ್ನು ಬಳಸಿಕೊಳ್ಳುತ್ತೇವೆ. ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ನಮ್ಮ ಪಕ್ಷವು ತನ್ನ ಕೆಲಸಕ್ಕೆ ಹೆಸರುವಾಸಿಯಾಗಿದೆ. ಇಂದಿನ ಸಭೆಯಲ್ಲಿ, ಮುಂಬರುವ ಎರಡು ವರ್ಷಗಳಲ್ಲಿ, ಪಂಜಾಬ್ ಅನ್ನು ಇಡೀ ರಾಷ್ಟ್ರ ನೋಡುವ ಮಾದರಿ ರಾಜ್ಯವನ್ನಾಗಿ ಮಾಡಲು ನಿರ್ಧರಿಸಲಾಯಿತು... ಪಂಜಾಬ್ ಯಾವಾಗಲೂ ಎಲ್ಲಾ ಹೋರಾಟಗಳಲ್ಲಿ ಮುಂಚೂಣಿಯಲ್ಲಿದೆ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

SCROLL FOR NEXT