ಪ್ರಧಾನ ಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಂದರ್ಭ  
ದೇಶ

Ranveer Allahbadia: 'ಪೋಷಕರ ಲೈಂಗಿಕತೆ' ಬಗ್ಗೆ ಹೇಳಿಕೆ; ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಶಿವಸೇನೆ ಸಂಸದೆ ಎಚ್ಚರಿಕೆ

ರಣವೀರ್ ಲಕ್ಷಾಂತರ ಮಂದಿ ಚಂದಾದಾರರನ್ನು ಹೊಂದಿರುವ ವ್ಯಕ್ತಿ, ಪ್ರತಿಯೊಬ್ಬ ರಾಜಕಾರಣಿಯೂ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಕುಳಿತು ಮಾತನಾಡಿದ್ದಾರೆ.

ನವದೆಹಲಿ: ರೋಸ್ಟ್ ಶೋ ಇಂಡಿಯಾಸ್ ಗಾಟ್ ಲೇಟೆಂಟ್ ನಲ್ಲಿ ಭಾಗವಹಿಸಿದ್ದ ವೇಳೆ ನೀಡಿದ್ದ ಹೇಳಿಕೆಗಳಿಂದ ಯೂಟ್ಯೂಬರ್ ಮತ್ತು ಪಾಡ್‌ಕ್ಯಾಸ್ಟರ್ ರಣವೀರ್ ಅಲಾಹಾಬಾದಿಯಾಗೆ ಮತ್ತಷ್ಟು ತೊಂದರೆಯುಂಟಾಗಿದೆ.

31 ವರ್ಷದ ರಣವೀರ್ ಅಲ್ಲಾಬಾದಿಯಾ ತಮ್ಮ ಹೇಳಿಕೆ ತೀವ್ರ ವಿವಾದಕ್ಕೆ ಸಿಲುಕಿದಾಗ ಕ್ಷಮೆ ಕೋರಿದರೂ ಕೂಡ ಅವರ ಹೇಳಿಕೆಗಳ ಸುತ್ತಲಿನ ವಿವಾದವು ದೊಡ್ಡ ಬಿಕ್ಕಟ್ಟಿಗೆ ಸಿಲುಕುತ್ತಿದೆ. ಶಿವಸೇನೆ (ಯುಬಿಟಿ) ಪಕ್ಷದ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಂಸದೀಯ ಸಮಿತಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಹಾಸ್ಯ, ವಿನೋದದ ಹೆಸರಿನಲ್ಲಿ ಯಾವುದೇ ನಿಂದನೀಯ ಭಾಷೆ ಮಿತಿಗಳನ್ನು ಮೀರಿದರೆ ಅದಕ್ಕೆ ಅರ್ಥವಿಲ್ಲ. ನಿಮಗೆ ಮಾತನಾಡಲು, ನಿಮ್ಮ ಪ್ರತಿಭೆ ತೋರಿಸಿಕೊಳ್ಳಲು ವೇದಿಕೆ ಸಿಗುತ್ತದೆ ಎಂದರೆ ನೀವು ಏನು ಬೇಕಾದರೂ ಮಾತನಾಡಬಹುದು ಎಂದರ್ಥವಲ್ಲ. ರಣವೀರ್ ಲಕ್ಷಾಂತರ ಮಂದಿ ಚಂದಾದಾರರನ್ನು ಹೊಂದಿರುವ ವ್ಯಕ್ತಿ, ಪ್ರತಿಯೊಬ್ಬ ರಾಜಕಾರಣಿಯೂ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಕುಳಿತು ಮಾತನಾಡಿದ್ದಾರೆ. ಪ್ರಧಾನ ಮಂತ್ರಿಗಳು ಅವರಿಗೆ ಪ್ರಶಸ್ತಿ ನೀಡಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸ್ಥಾಯಿ ಸಮಿತಿಯ ಸದಸ್ಯೆಯಾಗಿ, ನಾನು ಈ ವಿಷಯವನ್ನು ಪ್ರಸ್ತಾಪಿಸುತ್ತೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಏನಿದು ವಿವಾದ

ರಣವೀರ್ ಅಲಾಹಾಬಾದಿಯಾ ಅವರು ಸಾಕಷ್ಟು ಸೆಲೆಬ್ರಿಟಿಗಳನ್ನು ಸಂದರ್ಶನ ಮಾಡಿ ಫೇಮಸ್ ಆದವರು. ಅವರ ‘ಬೀರ್ ಬೈಸೆಪ್ಸ್’​ ಯೂಟ್ಯೂಬ್ ಚಾನೆಲ್ ಬರೋಬ್ಬರಿ 82 ಲಕ್ಷ ಸಬ್​ಸ್ಕ್ರೈಬರ್​​ಗಳನ್ನು ಒಳಗೊಂಡಿದೆ. ಇತ್ತೀಚೆಗೆ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಅತಿಥಿಯಾಗಿ ಬಂದಿದ್ದರು.

ಶೋನಲ್ಲಿ ಪರ್ಫಾರ್ಮ್ ಮಾಡಲು ಬಂದ ಸ್ಪರ್ಧಿಗೆ ರಣವೀರ್ ಅವರು ಪ್ರಶ್ನೆ ಒಂದನ್ನು ಕೇಳಿದ್ದರು. ‘ನಿಮ್ಮ ಜೀವನದುದ್ದಕ್ಕೂ ನಿಮ್ಮ ಹೆತ್ತವರು ಪ್ರತಿದಿನ ಲೈಂಗಿಕತೆಯನ್ನು ಹೊಂದುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರ ಜೊತೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ’ ಎಂದು ಕೇಳಿದ್ದರು.

ಈ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಅನೇಕ ನಾಯಕರು ಇದನ್ನು ವಿರೋಧಿಸಿದ್ದಾರೆ. ಮಹರಾಷ್ಟ್ರ ಮಹಿಳಾ ಕಮಿಷನ್​​ನವರು ಮುಂಬೈ ಕಮಿಷನರ್​ಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT