ಸಂಸದ ತೇಜಸ್ವಿ ಸೂರ್ಯ online desk
ದೇಶ

ಸಂಸತ್ ನಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ವಿಷಯ ಪ್ರಸ್ತಾಪಿಸಿದ Tejasvi Surya; ಹೊರೆಯಾಗದಂತೆ ದರ ನಿಗದಿಗೆ ಮನವಿ

ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ ಶೇ.100 ರಷ್ಟು ಪ್ರಯಾಣ ದರ ಏರಿಕೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರು ಮೆಟ್ರೋ ದರದಲ್ಲಿ ಭಾರಿ ಪ್ರಮಾಣದ ಏರಿಕೆ ಸಂಸತ್ ನಲ್ಲಿಯೂ ಪ್ರತಿಧ್ವನಿಸಿದೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದ ತೇಜಸ್ವಿ ಸೂರ್ಯ ಮೆಟ್ರೋ ದರಲ್ಲಿ ಭಾರಿ ಏರಿಕೆಯಾಗಿರುವುದರಿಂದ ಮಧ್ಯಮ ವರ್ಗಕ್ಕೆ ಉಂಟಾಗುತ್ತಿರುವ ಅನಾನುಕೂಲದ ಬಗ್ಗೆ ಸರ್ಕಾರದ ಗಮನ ಸೆಳೆದರು. ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ ಶೇ.100 ರಷ್ಟು ಪ್ರಯಾಣ ದರ ಏರಿಕೆಯಾಗಿದೆ.

ಇದರಿಂದಾಗಿ ಮೆಟ್ರೋ ಪ್ರಯಾಣ ದುಬಾರಿಯಾಗಿದ್ದು ನಗರಕ್ಕೆ ಸುಸ್ಥಿರ ಸಾರ್ವಜನಿಕ ಸಾರಿಗೆ ಪರಿಹಾರವಾಗಿರುವ ಮೂಲ ಉದ್ದೇಶಕ್ಕೇ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ದರ ರಚನೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವಿಷಯವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನೂ ತೇಜಸ್ವಿ ಸೂರ್ಯ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರದ ಏರಿಕೆಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.

ಫೆ.10 ರಂದು ಬಿಎಂ ಆರ್ ಸಿಎಲ್ ಕೇಂದ್ರ ಕಚೇರಿಗೆ ತೆರಳಿದ್ದ ಬಿಜೆಪಿ ನಿಯೋಗ, ಏರಿಕೆಯಾಗಿರುವ ದರವನ್ನು ಜನ ಸಾಮಾನ್ಯರಿಗೆ ಹೊರೆಯಾಗದಂತೆ ಇಳಿಸುವಂತೆ ಮನವಿ ಮಾಡಿತ್ತು. ದರ ಏರಿಕೆ ಕಡಿಮೆ ಮಾಡಿದಿದ್ದರೆ ಹೋರಾಟ ಮಾಡುವುದಾಗಿ ಹೇಳಿದ್ದೇವೆ. ಜನಕ್ಕೆ ಹೆಚ್ಚು ಹೊರೆಯಾಗದಂತೆ ಏರಿಸಲಿ ಎಂದು ಜಯನಗರ ಶಾಸಕ ಸಿಕೆ ರಾಮಮೂರ್ತಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್