ಶಾಸಕ ಅಮಾನತುಲ್ಲಾ ಖಾನ್  
ದೇಶ

ಕ್ರಿಮಿನಲ್ ಪರಾರಿಯಾಗಲು ನೆರವು: AAP ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ FIR ದಾಖಲು

ಶಾಸಕ ಖಾನ್ ಮತ್ತು ಕ್ರೈಂ ಬ್ರಾಂಚ್ ತಂಡದ ನಡುವಿನ ತೀವ್ರ ವಾಗ್ವಾದ ನಡೆಯುತ್ತಿತ್ತು. ಈ ಗೊಂದಲದ ಲಾಭಪಡೆದುಕೊಂಡ ಶಹಬಾಜ್ ಖಾನ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪಲಾಯನ ಮಾಡಿದ್ದ.

ನವದೆಹಲಿ: ವಾಂಟೆಡ್ ಕ್ರಿಮಿನಲ್ ಒಬ್ಬ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ದೆಹಲಿಯ ZZP ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕೊಲೆ ಯತ್ನದ ಆರೋಪ ಎದುರಿಸುತ್ತಿರುವ ಶಹಬಾಜ್ ಖಾನ್ ಎಂಬಾತನನ್ನು ಬಂಧಿಸಲು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜಾಮಿಯಾದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಅಧಿಕಾರಿಗಳು ಆರೋಪಿಯನ್ನು ಯಶಸ್ವಿಯಾಗಿ ಕಸ್ಟಡಿಗೆ ತೆಗೆದುಕೊಂಡಿದ್ದ ವೇಳೆ ಅಮಾನತುಲ್ಲಾ ಖಾನ್ ಮಧ್ಯಪ್ರವೇಶಿಸಿ, ಬಂಧನದ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿ ವ್ಯಕ್ತಿಯು ಅಪರಾಧಿಯಲ್ಲ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದರು.

ಶಾಸಕ ಖಾನ್ ಮತ್ತು ಕ್ರೈಂ ಬ್ರಾಂಚ್ ತಂಡದ ನಡುವಿನ ತೀವ್ರ ವಾಗ್ವಾದ ನಡೆಯುತ್ತಿತ್ತು. ಈ ಗೊಂದಲದ ಲಾಭಪಡೆದುಕೊಂಡ ಶಹಬಾಜ್ ಖಾನ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪಲಾಯನ ಮಾಡಿದ್ದ. ಅಮಾನತುಲ್ಲಾ ಖಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಮಿಯಾ ನಗರದಲ್ಲಿ ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ ಆರೋಪ ಹೊತ್ತಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಅಮನತುಲ್ಲಾ ಖಾನ್ ಅವರನ್ನು ಬಂಧಿಸಲು ದೆಹಲಿ ಪೊಲೀಸರು ಹಲವೆಡೆ ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT