ಅಖಿಲೇಶ್ ಯಾದವ್ 
ದೇಶ

ಕುಂಭಮೇಳ ಕಾಲ್ತುಳಿತ: ಡಿಜಿಟಲೀಕರಣ ಹೇಳಿಕೆ ಹೊರತಾಗಿಯೂ ಸಾವಿನ ನಿಖರ ಸಂಖ್ಯೆ ಏಕೆ ಇಲ್ಲ?

ಉತ್ತರ ಪ್ರದೇಶ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕನ್ನೌಜ್ ಸಂಸದ, "ಡಬಲ್ ಎಂಜಿನ್ ಸರ್ಕಾರ ಡಬಲ್ ಪ್ರಮಾದಗಳನ್ನು ಮಾಡುತ್ತಿದೆ" ಎಂದರು.

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮಹಾ ಕುಂಭದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಂಗಳವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಮತ್ತು ಡಿಜಿಟಲೀಕರಣದ ಬಗ್ಗೆ ಸಾಕಷ್ಟು ಜಾಹೀರಾತು ನೀಡಲಾಗಿದ್ದರೂ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ನಿಖರ ಅಂಕಿ ಅಂಶಗಳು ಏಕೆ ಹೊರಬರುತ್ತಿಲ್ಲ ಎಂದು ಪ್ರಶ್ನಿಸಿದರು.

ಉತ್ತರ ಪ್ರದೇಶ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕನ್ನೌಜ್ ಸಂಸದ, "ಡಬಲ್ ಎಂಜಿನ್ ಸರ್ಕಾರ ಡಬಲ್ ಪ್ರಮಾದಗಳನ್ನು ಮಾಡುತ್ತಿದೆ" ಎಂದರು.

"ಮೊದಲ ಬಾರಿಗೆ, ಕುಂಭದಲ್ಲಿ ಭಕ್ತರು 300 ಕಿ.ಮೀ ಉದ್ದದ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ಯಗಳ ಗಡಿಗಳನ್ನು ಬಂದ್ ಮಾಡಲಾಗಿದೆ... ಇದು 'ವಿಕ್ಷಿತ ಭಾರತ'ದ ಚಿತ್ರಣ. ಅಲ್ಲಿ ಸರ್ಕಾರಕ್ಕೆ ವಾಹನ ಸಂಚಾರವನ್ನು ನಿರ್ವಹಿಸಲು ಸಹ ಸಾಧ್ಯವಾಗುತ್ತಿಲ್ಲ. ಭೂಮಿಯ ಮೇಲಿನ ಸಮಸ್ಯೆಗಳನ್ನು ನಾವು ಪರಿಹರಿಸಲು ಸಾಧ್ಯವಾಗದಿದ್ದಾಗ ಚಂದ್ರನ ಮೇಲೆ ಹೋಗುವುದರ ಅರ್ಥವೇನು" ಎಂದು ಮಾಜಿ ಸಿಎಂ ಪ್ರಶ್ನಿಸಿದರು.

"ಆ ಡ್ರೋನ್‌ಗಳು ಈಗ ಎಲ್ಲಿವೆ ಎಂದು ನಾನು ಕೇಳಲು ಬಯಸುತ್ತೇನೆ?... ಡಿಜಿಟಲೀಕರಣದ ಬಗ್ಗೆ ಸಂಪೂರ್ಣ ಜಾಹೀರಾತು... ಈಗಲೂ ಅವರಿಗೆ ಮಹಾ ಕುಂಭದಲ್ಲಿ ಸಾವನ್ನಪ್ಪಿದ ಅಥವಾ ಕಳೆದುಹೋದವರ ಅಂಕಿಅಂಶಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ" ಎಂದು ಯಾದವ್ ಟೀಕಿಸಿದರು.

"ಉತ್ತರ ಪ್ರದೇಶದಲ್ಲಿ ಅವರು ಡಬಲ್ ಎಂಜಿನ್ ಸರ್ಕಾರವನ್ನು ಹೊಂದಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಡಬಲ್ ಎಂಜಿನ್ ಸರ್ಕಾರ ಡಬಲ್ ಪ್ರಮಾದಗಳನ್ನು ಮಾಡುತ್ತಿದೆ" ಎಂದರು.

ಪ್ರತಿ 12 ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಈ ಬೃಹತ್ ಧಾರ್ಮಿಕ ಕಾರ್ಯಕ್ರಮವು ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಿಂದ 45 ದಿನಗಳವರೆಗೆ ನಡೆಯುತ್ತಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ಫೆಬ್ರವರಿ 9 ರವರೆಗೆ 44 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT