ಸುಪ್ರೀಂ ಕೋರ್ಟ್  
ದೇಶ

ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸಲು ಬಾಧ್ಯರಲ್ಲ: ಸುಪ್ರೀಂ ಕೋರ್ಟ್

ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್‌ಕೆ ಸಿಂಗ್ ಅವರನ್ನೊಳಗೊಂಡ ಪೀಠವು ಒಪ್ಪಲಿಲ್ಲ.

ನವದೆಹಲಿ: ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸಲು ಬಾಧ್ಯರಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್‌ಕೆ ಸಿಂಗ್ ಅವರನ್ನೊಳಗೊಂಡ ಪೀಠವು ಒಪ್ಪಲಿಲ್ಲ.

ಯಾವುದೇ ಸಂಸ್ಥೆ ಸಂಬಂಧ ಹೊಂದಿಲ್ಲದಿದ್ದರೆ ಪ್ರತಿವಾದಿಗಳು (ಲಾಟರಿ ವಿತರಕರು) ಸೇವಾ ತೆರಿಗೆ ಪಾವತಿಸಲು ಬಾಧ್ಯರಾಗಿರಲಿಲ್ಲ. ಆದಾಗ್ಯೂ, ಪ್ರತಿವಾದಿಗಳು ಸಂವಿಧಾನದ ಎಂಟ್ರಿ 62, ಪಟ್ಟಿ II ರ ಅಡಿಯಲ್ಲಿ ರಾಜ್ಯವು ವಿಧಿಸುವ ಜೂಜಿನ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎಂದು ನ್ಯಾಯಮೂರ್ತಿ ನಾಗರತ್ನ ತೀರ್ಪು ಪ್ರಕಟಿಸಿದರು.

ಲಾಟರಿ ಟಿಕೆಟ್‌ಗಳ ಖರೀದಿದಾರ ಮತ್ತು ಸಂಸ್ಥೆಯ ನಡುವಿನ ವಹಿವಾಟಿನ ಮೇಲೆ ಸೇವಾ ತೆರಿಗೆ ವಿಧಿಸಲಾಗುವುದಿಲ್ಲ, ಯೂನಿಯನ್ ಆಫ್ ಇಂಡಿಯಾ ಮತ್ತು ಇತರರು ಸಲ್ಲಿಸಿದ ಮೇನ್ಮನವಿಗಳು ಪುರಸ್ಕಾರಕ್ಕೆ ಅರ್ಹವಲ್ಲ. ಆದ್ದರಿಂದ, ಈ ಮೇಲ್ಮನವಿಗಳನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಸಿಕ್ಕಿಂ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಲಾಟರಿಗಳ ಮೇಲೆ ತೆರಿಗೆ ವಿಧಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು, ಕೇಂದ್ರವಲ್ಲ ಎಂದು ಹೇಳಿದೆ. ಸೇವಾ ತೆರಿಗೆ ವಿಧಿಸುವ ಹಕ್ಕು ತನಗೆ ಇದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಲಾಟರಿ ಸಂವಿಧಾನದ ರಾಜ್ಯ ಪಟ್ಟಿಯ ನಮೂದು 62 ರ ಭಾಗವಾಗಿರುವ "ಬೆಟ್ಟಿಂಗ್ ಮತ್ತು ಜೂಜಾಟ" ಎಂಬ ಅಭಿವ್ಯಕ್ತಿಯೊಳಗೆ ಬರುತ್ತದೆ. ಇದಕ್ಕೆ ರಾಜ್ಯ ಸರ್ಕಾರ ಮಾತ್ರ ತೆರಿಗೆ ವಿಧಿಸಬಹುದು ಎಂದು ಹೈಕೋರ್ಟ್ ಹೇಳಿದ್ದು ಸರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರ 2013 ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಲಾಟರಿ ಸಂಸ್ಥೆ ಫ್ಯೂಚರ್ ಗೇಮಿಂಗ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT