ಸಾಂದರ್ಭಿಕ ಚಿತ್ರ  
ದೇಶ

ಮುಂಬೈ: ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಗೆ ವಾಣಿಜ್ಯ ನಗರಿಯಲ್ಲಿ ಮೊದಲ ಸಾವು

ಮುಂಬೈನ ವಡಾಲಾ ಪ್ರದೇಶದ ನಿವಾಸಿ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸ್ವಲ್ಪ ಸಮಯದ ಹಿಂದೆ ಪುಣೆಗೆ ಭೇಟಿ ನೀಡಿದ್ದರು.

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಆಸ್ಪತ್ರೆಯಲ್ಲಿ 53 ವರ್ಷದ ವ್ಯಕ್ತಿಯೊಬ್ಬರು ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (GBS) ನಿಂದ ಮೃತಪಟ್ಟಿದ್ದಾರೆ. ನರ ಅಸ್ವಸ್ಥತೆಯಿಂದಾಗಿ ಉಂಟಾಗುವ ಕಾಯಿಲೆ ಇದಾಗಿದ್ದು ಮಹಾರಾಷ್ಟ್ರ ರಾಜ್ಯದಲ್ಲಿ ಒಟ್ಟು 192 ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ ಶಂಕಿತ ಪ್ರಕರಣಗಳು ಪತ್ತೆಯಾಗಿವೆ.

ಮುಂಬೈನ ವಡಾಲಾ ಪ್ರದೇಶದ ನಿವಾಸಿ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸ್ವಲ್ಪ ಸಮಯದ ಹಿಂದೆ ಪುಣೆಗೆ ಭೇಟಿ ನೀಡಿದ್ದರು, ಅಲ್ಲಿ ರೋಗ ಏಕಾಏಕಿ ಉಲ್ಭಣಗೊಂಡಿತ್ತು. ಜನವರಿ 23 ರಂದು ಅವರನ್ನು ಇಲ್ಲಿನ ಮತ್ತೊಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿ ಹಲವಾರು ದಿನಗಳಿಂದ ಗಂಭೀರ ಸ್ಥಿತಿಯಲ್ಲಿದ್ದು ನಿನ್ನೆ ಮೃತಪಟ್ಟಿದ್ದಾರೆ.

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಆಯುಕ್ತರು ಮತ್ತು ಅದರ ರಾಜ್ಯ ನಿಯೋಜಿತ ಆಡಳಿತಾಧಿಕಾರಿ ಭೂಷಣ್ ಗಗ್ರಾನಿ ಪಿಟಿಐ ಸುದ್ದಿಸಂಸ್ಥೆಗೆ ಇದನ್ನು ದೃಢಪಡಿಸಿದ್ದಾರೆ. ಇದು ಜಿಬಿಎಸ್ ಕಾರಣದಿಂದಾಗಿ ಮಹಾನಗರದಲ್ಲಿ ಸಂಭವಿಸಿದ ಮೊದಲ ಸಾವಿನ ಪ್ರಕರಣವಾಗಿದೆ.

ಜಿಬಿಎಸ್, ಒಂದು ಅಪರೂಪದ ಸ್ಥಿತಿಯಾಗಿದ್ದು, ಇದರಲ್ಲಿ ವ್ಯಕ್ತಿಯ ರೋಗನಿರೋಧಕ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ದಾಳಿ ಮಾಡುತ್ತದೆ, ಇದರ ಪರಿಣಾಮವಾಗಿ ಸ್ನಾಯು ದೌರ್ಬಲ್ಯ, ಕಾಲುಗಳು ಮತ್ತು ತೋಳುಗಳಲ್ಲಿ ಸಂವೇದನೆ ಕಳೆದುಕೊಂಡು ನುಂಗಲು ಮತ್ತು ಉಸಿರಾಟಕ್ಕೆ ಕಷ್ಟವಾಗುತ್ತದೆ.

ನೆರೆಯ ಪಾಲ್ಘರ್ ಜಿಲ್ಲೆಯ 16 ವರ್ಷದ ಬಾಲಕಿ ಪ್ರಸ್ತುತ ನಾಯರ್ ಆಸ್ಪತ್ರೆಯಲ್ಲಿ ಜಿಬಿಎಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಬಿಎಂಸಿ ತಿಳಿಸಿದೆ. ಮುಂಬೈನ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಜಿಬಿಎಸ್ ರೋಗಿಗಳ ಚಿಕಿತ್ಸೆಗಾಗಿ ಸಿದ್ಧವಾಗಿವೆ. ಅಗತ್ಯ ಔಷಧಗಳು, ಉಪಕರಣಗಳು ನಗರದಲ್ಲಿ ಲಭ್ಯವಿತ್ತು ಎಂದು ಅದು ಹೇಳಿದೆ.

ಅಂಧೇರಿ (ಪೂರ್ವ) ನಿವಾಸಿ 64 ವರ್ಷದ ಮಹಿಳೆಗೆ ನರ ಅಸ್ವಸ್ಥತೆ ಇರುವುದು ಪತ್ತೆಯಾಗಿ ಫೆ7 ರಂದು ಮುಂಬೈಯಲ್ಲಿ ಮೊದಲ ಜಿಬಿಎಸ್ ಪ್ರಕರಣವನ್ನು ವರದಿಯಾಗಿತ್ತು. ಪುಣೆ ಪ್ರದೇಶವು ಇಲ್ಲಿಯವರೆಗೆ ಶಂಕೆಯಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ಪುಣೆ ಪ್ರದೇಶದಲ್ಲಿ ಶಂಕಿತ ಮತ್ತು ದೃಢಪಡಿಸಿದ ಜಿಬಿಎಸ್ ಪ್ರಕರಣಗಳ ಸಂಖ್ಯೆ 197 ಕ್ಕೆ ತಲುಪಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

SCROLL FOR NEXT