ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ವೇಗದ ಬೆಳವಣಿಗೆ, ಖಾಸಗಿ ಹೂಡಿಕೆ ಉತ್ತೇಜನ ಬಜೆಟ್‌ನ ಗುರಿ: ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.

ನವದೆಹಲಿ: ವೇಗದ ಬೆಳವಣಿಗೆ, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸುವುದು ಮತ್ತು ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸುವುದು ಕೇಂದ್ರ ಬಜೆಟ್ 2025-26 ರ ಗುರಿಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಾಮಾನ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಅಂದಾಜು ಅಥವಾ ಮುನ್ಸೂಚನೆಗಳನ್ನು ಮೀರಿ ಗಂಭೀರ ಬಾಹ್ಯ ಸವಾಲುಗಳೊಂದಿಗೆ ಸವಾಲಿನ ಸಮಯದಲ್ಲಿ ಬಜೆಟ್ ಸಿದ್ಧಪಡಿಸಲಾಗಿದೆ. ಇದರ ಹೊರತಾಗಿಯೂ ಭಾರತದ ಹಿತಾಸಕ್ತಿಗಳನ್ನು ಮುಖ್ಯವಾಗಿಟ್ಟುಕೊಂಡು ಮೌಲ್ಯಮಾಪನವನ್ನು ಸಾಧ್ಯವಾದಷ್ಟು ನಿಖರವಾಗಿ ಇರಿಸಲು ಪ್ರಯತ್ನಿಸಿದೆ ಎಂದು ಹೇಳಿದರು.

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ಒತ್ತಿ ಹೇಳಿದರು.

ರಾಷ್ಟ್ರೀಯ ಅಂಕಿಅಂಶ ಕಚೇರಿ (NSO)ಯ ಮೊದಲ ಮುಂಗಡ ಅಂದಾಜಿನ ಪ್ರಕಾರ ಭಾರತದ ಆರ್ಥಿಕತೆಯ ಬೆಳವಣಿಗೆ ನೈಜ ಪರಿಭಾಷೆಯಲ್ಲಿ ಶೇ. 6.4 ರಷ್ಟು ಮತ್ತು ನಾಮಮಾತ್ರದಲ್ಲಿ ಶೇ. 9.7 ರಷ್ಟು ಇರಲಿದೆ. ಆದ್ದರಿಂದ ಬಜೆಟ್‌ಗಾಗಿ ನಮ್ಮ ಗುರಿಗಳನ್ನು ಇಟ್ಟುಕೊಂಡಿದ್ದೇವೆ. ಅಂದರೆ ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸಲು, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸಲು, ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ, ಭಾರತ "ದುರ್ಬಲವಾದ ಐದು" ಆರ್ಥಿಕತೆಗಳಲ್ಲಿ ಒಂದಾಗಿತ್ತು ಎಂದು ನೆನಪಿಸಿಕೊಂಡ ಸಚಿವರು, COVID ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಆರ್ಥಿಕತೆಯನ್ನು ಉತ್ತಮವಾಗಿ ಮುನ್ನಡೆಸಿದ್ದು, ದೇಶವು ವಿಶ್ವದ ಐದನೇ ಅತಿದೊಡ್ಡ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್