ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ವೇಗದ ಬೆಳವಣಿಗೆ, ಖಾಸಗಿ ಹೂಡಿಕೆ ಉತ್ತೇಜನ ಬಜೆಟ್‌ನ ಗುರಿ: ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.

ನವದೆಹಲಿ: ವೇಗದ ಬೆಳವಣಿಗೆ, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸುವುದು ಮತ್ತು ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸುವುದು ಕೇಂದ್ರ ಬಜೆಟ್ 2025-26 ರ ಗುರಿಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಾಮಾನ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಅಂದಾಜು ಅಥವಾ ಮುನ್ಸೂಚನೆಗಳನ್ನು ಮೀರಿ ಗಂಭೀರ ಬಾಹ್ಯ ಸವಾಲುಗಳೊಂದಿಗೆ ಸವಾಲಿನ ಸಮಯದಲ್ಲಿ ಬಜೆಟ್ ಸಿದ್ಧಪಡಿಸಲಾಗಿದೆ. ಇದರ ಹೊರತಾಗಿಯೂ ಭಾರತದ ಹಿತಾಸಕ್ತಿಗಳನ್ನು ಮುಖ್ಯವಾಗಿಟ್ಟುಕೊಂಡು ಮೌಲ್ಯಮಾಪನವನ್ನು ಸಾಧ್ಯವಾದಷ್ಟು ನಿಖರವಾಗಿ ಇರಿಸಲು ಪ್ರಯತ್ನಿಸಿದೆ ಎಂದು ಹೇಳಿದರು.

ಬಜೆಟ್ ನಲ್ಲಿ ವಲಯವಾರು ಹಂಚಿಕೆಗಳನ್ನು ಕಡಿಮೆ ಮಾಡಿಲ್ಲ ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಪರಿಣಾಮಕಾರಿ ಬಂಡವಾಳ ವೆಚ್ಚವನ್ನು ರೂ. 19.08 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ಒತ್ತಿ ಹೇಳಿದರು.

ರಾಷ್ಟ್ರೀಯ ಅಂಕಿಅಂಶ ಕಚೇರಿ (NSO)ಯ ಮೊದಲ ಮುಂಗಡ ಅಂದಾಜಿನ ಪ್ರಕಾರ ಭಾರತದ ಆರ್ಥಿಕತೆಯ ಬೆಳವಣಿಗೆ ನೈಜ ಪರಿಭಾಷೆಯಲ್ಲಿ ಶೇ. 6.4 ರಷ್ಟು ಮತ್ತು ನಾಮಮಾತ್ರದಲ್ಲಿ ಶೇ. 9.7 ರಷ್ಟು ಇರಲಿದೆ. ಆದ್ದರಿಂದ ಬಜೆಟ್‌ಗಾಗಿ ನಮ್ಮ ಗುರಿಗಳನ್ನು ಇಟ್ಟುಕೊಂಡಿದ್ದೇವೆ. ಅಂದರೆ ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸಲು, ಅಂತರ್ಗತ ಅಭಿವೃದ್ಧಿಯನ್ನು ಸುರಕ್ಷಿತಗೊಳಿಸಲು, ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ, ಭಾರತ "ದುರ್ಬಲವಾದ ಐದು" ಆರ್ಥಿಕತೆಗಳಲ್ಲಿ ಒಂದಾಗಿತ್ತು ಎಂದು ನೆನಪಿಸಿಕೊಂಡ ಸಚಿವರು, COVID ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಆರ್ಥಿಕತೆಯನ್ನು ಉತ್ತಮವಾಗಿ ಮುನ್ನಡೆಸಿದ್ದು, ದೇಶವು ವಿಶ್ವದ ಐದನೇ ಅತಿದೊಡ್ಡ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ತಿರುಪ್ಪೂರ್: ಟಿವಿಕೆ ವಿಜಯ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತ್ತೊಂದು ಅವಘಡ: ಕುಸಿದುಬಿದ್ದು 15 ಮಂದಿ ಆಸ್ಪತ್ರೆಗೆ ದಾಖಲು!

IPL 2026: ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ CSK!

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ: ಅಶೋಕ್ ಪಟ್ಟಣ್

SCROLL FOR NEXT