ಕಾಶಿ ವಿಶ್ವನಾಥ ದೇಗುಲದ ಉಪವಿಭಾಗಾಧಿಕಾರಿ ಶಂಭು ಶರಣ್ ಸಿಂಗ್ 
ದೇಶ

ವಾರಣಾಸಿ: ಕಾಶಿ ವಿಶ್ವನಾಥ ದೇವಾಲಯ ಹುಂಡಿಯಲ್ಲಿ ಒಂದು ತಿಂಗಳಲ್ಲಿ 7 ಕೋಟಿ ರೂ ಕಾಣಿಕೆ ಸಂಗ್ರಹ!

ಇಲ್ಲಿಯವರೆಗೆ ಎಣಿಸಿದ ದೇಣಿಗೆಯಲ್ಲಿ ಸಾರ್ವಜನಿಕರು ಇಷ್ಟೊಂದು ಪ್ರಮಾಣದ ಕಾಣಿಕೆ ಹಾಕಿರುವುದು ಕಂಡುಬಂದಿದೆ.

ವಾರಣಾಸಿ: ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಹುಂಡಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ದಾಖಲೆಯ ರೂ.7 ಕೋಟಿ ಹಣ ಸಂಗ್ರಹವಾಗಿದೆ.

ಇಲ್ಲಿಯವರೆಗೆ ಎಣಿಸಿದ ದೇಣಿಗೆಯಲ್ಲಿ ಸಾರ್ವಜನಿಕರು ಇಷ್ಟೊಂದು ಪ್ರಮಾಣದ ಕಾಣಿಕೆ ಹಾಕಿರುವುದು ಕಂಡುಬಂದಿದೆ. ಹೆಚ್ಚುವರಿ ಹುಂಡಿಗಳೊಂದಿಗೆ ವಿಶೇಷವಾಗಿ ಚಿನ್ನ ಮತ್ತು ಬೆಳ್ಳಿಯ ದೇಣಿಗೆಗಳನ್ನು ಇನ್ನೂ ಲೆಕ್ಕಹಾಕಬೇಕಾಗಿದೆ.

ಸುಗಮ ದರ್ಶನ ಮತ್ತು ಆರತಿ ಸೇವೆಗಾಗಿ ಟಿಕೆಟ್ ಮಾರಾಟವನ್ನು ದೇವಾಲಯದ ಆಡಳಿತ ಮಂಡಳಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಇದರ ಹೊರತಾಗಿಯೂ ಮಹಾಕುಂಭದ ನಂತರದ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದು, ದೇವಾಲಯದ ಹುಂಡಿಗಳಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕಾಶಿ ವಿಶ್ವನಾಥ ದೇಗುಲದ ಉಪವಿಭಾಗಾಧಿಕಾರಿ (ಎಸ್‌ಡಿಎಂ) ಶಂಭು ಶರಣ್ ಸಿಂಗ್, ಯಾತ್ರಿಕರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ, ವಿಶೇಷವಾಗಿ ಮಹಾಕುಂಭದಿಂದ ಭಕ್ತರು ಹಿಂತಿರುಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ ತಿಂಗಳು ಸುಮಾರು 1.5 ಕೋಟಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದು, ದರ್ಶನಕ್ಕೆ ಯಾವುದೇ ಟಿಕೆಟ್ ಇಲ್ಲದಿದ್ದರೂ ಹುಂಡಿಗಳಲ್ಲಿ ರೂ. 7 ಕೋಟಿ ದೇಣಿಗೆಯನ್ನು ಸ್ವೀಕರಿಸಿದ್ದೇವೆ. ಚಿನ್ನ ಮತ್ತು ಬೆಳ್ಳಿ ಕಾಣಿಕೆ ಹುಂಡಿಗಳಲ್ಲಿಯೂ ಕಾಣಿಕೆ ಹೆಚ್ಚಾಗಿ ಸಂಗ್ರಹವಾಗಿರುವ ಸಾಧ್ಯತೆಯಿದೆ. ಹೆಚ್ಚಿನ ಭಕ್ತರ ಆಗಮನ ಹಿನ್ನೆಲೆಯಲ್ಲಿ ಆ ಹುಂಡಿಗಳನ್ನು ಇನ್ನೂ ಲೆಕ್ಕ ಮಾಡಲು ಸಾಧ್ಯವಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT