ಮದುವೆ ಮನೆಗೆ ನುಗ್ಗಿದ್ದ ಚಿರತೆ 
ದೇಶ

ಮದುವೆ ಸಂಭ್ರಮದಲ್ಲಿದ್ದವರಿಗೆ ಚಿರತೆ ಶಾಕ್; ಪ್ರಾಣ ಉಳಿಸಿಕೊಳ್ಳಲು ವಧು-ವರ ಕಾರಿನಲ್ಲೇ ಲಾಕ್!

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು.

ಲಖನೌ: ಇಲ್ಲಿ ನಡೆಯುತ್ತಿದ್ದ ಮದುವೆಯೊಂದಕ್ಕೆ ಚಿರತೆಯೊಂದು ನುಗ್ಗಿದ್ದು, ತೀವ್ರ ಆತಂಕಕ್ಕೆ ಕಾರಣವಾಯಿತು. ಘಟನೆಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಓಡಿದ ವಧು-ವರರು ಕಾರಿನಲ್ಲಿ ಸಿಲುಕಿಕೊಳ್ಳುವಂತಾಯಿತು.

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಧಿಕ್ಕಾಪಾಲಾಗಿ ಓಡಿದರು. ಸ್ಥಳದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಚಿರತೆ ನುಗ್ಗುತ್ತಿದ್ದಂತೆ ಮಂಟಪದಲ್ಲಿ ಕುಳಿತಿದ್ದ ವಧು-ವರರೂ ಕೂಡ ಓಡಿ ಹೋಗಿ ಕಾರಿನಲ್ಲಿ ಲಾಕ್ ಮಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಕ್ಷಣ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹಲವು ಗಂಟೆಗಳ ಪ್ರಯತ್ನದ ನಂತರ ತಡರಾತ್ರಿ 2 ಗಂಟೆ ಸುಮಾರಿಗೆ ಚಿರತೆಯನ್ನು ಸೆರೆಹಿಡಿಯಲಾಗಿದೆ.

ಪೊಲೀಸರ ಪ್ರಕಾರ, ಚಿರತೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಅಧಿಕಾರಿ ಮುಕದ್ದರ್ ಅಲಿ ಅವರ ಕೈಗೆ ಗಾಯಗಳಾಗಿವೆ. ಚಿರತೆ ಹಿಡಿಯುವವರೆಗೂ, ವಧು ಮತ್ತು ವರರ ಕುಟುಂಬದವರು ಸುರಕ್ಷತೆಗಾಗಿ ತಮ್ಮ ವಾಹನಗಳಲ್ಲಿ ಕುಳಿತಿದ್ದರು ಎಂದು ಅತಿಥಿಯೊಬ್ಬರು ಹೇಳಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈಮಧ್ಯೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘಟನೆಯ ಬಗ್ಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಘಟನೆಯು ರಾಜ್ಯ ಸರ್ಕಾರದ "ಭ್ರಷ್ಟಾಚಾರ"ದ ಪರಿಣಾಮವಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಉತ್ತರ ಪ್ರದೇಶದ 'ಜುಮ್ಲಾಜೀವಿ' ಬಿಜೆಪಿ ಸರ್ಕಾರವು ಬೀದಿ ನಾಯಿಗಳ ಸಮಸ್ಯೆಗೆ ಇನ್ನೂ ಪರಿಹಾರ ಕಂಡುಕೊಂಡಿಲ್ಲ ಮತ್ತು ಇದೀಗ ರಾಜ್ಯ ರಾಜಧಾನಿಯಲ್ಲಿ 'ಚಿರತೆ' ಬಂದಿರುವುದು ವರದಿಯಾಗಿದೆ. ಲಖನೌನಲ್ಲಿ ಮದುವೆಗೆ ಚಿರತೆಯೊಂದು ನುಗ್ಗಿದ ಸುದ್ದಿ ಆತಂಕಕಾರಿಯಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಕಾಡಿನಲ್ಲಿ ಮಾನವನ ಅತಿಕ್ರಮಣ ಹೆಚ್ಚುತ್ತಿದೆ. ಹೀಗಾಗಿ, ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಇದರಿಂದ ಸಾಮಾನ್ಯ ಜನರ ಜೀವಕ್ಕೆ ಅಪಾಯ ಎದುರಾಗುತ್ತಿದೆ' ಎಂದಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆಯೋ ಅಥವಾ ಇದು ಚಿರತೆ ಅಲ್ಲ, ದೊಡ್ಡ ಗಾತ್ರದ ಬೆಕ್ಕು ಎಂದು ಹೇಳಿ ಘಟನೆಯನ್ನು ಮುಚ್ಚಿಹಾಕುತ್ತದೆಯೋ ನೋಡಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT