ಜಗದಂಬಿಕಾ ಪಾಲ್ TNIE
ದೇಶ

Waqf Bill ಕುರಿತ ಜೆಪಿಸಿ ವರದಿ ಗದ್ದಲ: ಲೋಕಸಭಾ ಕಲಾಪ ಮಾರ್ಚ್ 10ರವರೆಗೆ ಮುಂದೂಡಿಕೆ

ಬಿಜೆಪಿ ಸಂಸದೆ ಜಗದಂಬಿಕಾ ಪಾಲ್ ಅವರು ವಕ್ಫ್ ಮಸೂದೆಯ ಕುರಿತಾದ ಜೆಪಿಸಿ ವರದಿಯನ್ನು ಸದನದಲ್ಲಿ ಮಂಡಿಸಿದರು.

ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಹಂತದ ಕೊನೆಯ ದಿನವಾಗಿದ್ದು, ವಕ್ಫ್ ಮಸೂದೆಯ ಕುರಿತಾದ ಜೆಪಿಸಿ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಗದ್ದಲದಿಂದಾಗಿ ಉಭಯ ಸದನಗಳ ಕಲಾಪಗಳಿಗೆ ಅಡ್ಡಿಯಾಯಿತು. ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದ ನಂತರ ಮತ್ತೆ ಆರಂಭಿಸಲಾಯಿತು. ಇದಾದ ನಂತರ, ಬಿಜೆಪಿ ಸಂಸದೆ ಜಗದಂಬಿಕಾ ಪಾಲ್ ಅವರು ವಕ್ಫ್ ಮಸೂದೆಯ ಕುರಿತಾದ ಜೆಪಿಸಿ ವರದಿಯನ್ನು ಸದನದಲ್ಲಿ ಮಂಡಿಸಿದರು. 18 ನಿಮಿಷಗಳ ಸಂಕ್ಷಿಪ್ತ ಕಲಾಪದ ನಂತರ, ಸ್ಪೀಕರ್ ಓಂ ಬಿರ್ಲಾ ಸದನವನ್ನು ಮಾರ್ಚ್ 10ರವರೆಗೆ ಮುಂದೂಡಿದರು.

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಲೋಕಸಭಾ ಕಲಾಪವನ್ನು ಮುಂದೂಡಿದ ನಂತರ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಸಂಸದ ಅಸಾದುದ್ದೀನ್ ಓವೈಸಿ ಸಂಸತ್ತಿನ ಆವರಣದಲ್ಲಿ ಮಾತನಾಡಿದ್ದು, ಈ ಮಸೂದೆಯು ಅಸಾಂವಿಧಾನಿಕವಾಗಿದೆ ಎಂದು ಹೇಳಿದರು. ಈ ಮಸೂದೆಯು ಸಂವಿಧಾನದ 14, 15 ಮತ್ತು 29ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಹೇಳಿದರು. ಈ ಮಸೂದೆಯ ಉದ್ದೇಶ ವಕ್ಫ್ ಅನ್ನು ಉಳಿಸುವುದಲ್ಲ, ಬದಲಾಗಿ ಅದನ್ನು ನಾಶಮಾಡಿ ಮುಸ್ಲಿಮರಿಂದ ಕಸಿದುಕೊಳ್ಳುವುದು. ಈ ಮಸೂದೆಯನ್ನು ಖಂಡಿಸುವುದಾಗಿ ಅವರು ಹೇಳಿದರು. ಸಂಸದರ ಭಿನ್ನಾಭಿಪ್ರಾಯದ ಶೇ. 70ರಷ್ಟು ಸಂಪಾದಿತ ಆವೃತ್ತಿಯನ್ನು ಜೆಪಿಸಿ ವರದಿಯಲ್ಲಿ ಸೇರಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ಓವೈಸಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT