ರಾಜ್ಯಸಭೆ 
ದೇಶ

ವಕ್ಫ್ ಮಸೂದೆ ಕುರಿತ JPC ವರದಿ ರಾಜ್ಯಸಭೆಯಲ್ಲಿ ಮಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿ(JPC)ಯ ವರದಿಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಯಿತು.

ಜೆಪಿಸಿ ವರದಿ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದವು ಮತ್ತು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, "ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ..." ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.

ಆದಾಗ್ಯೂ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಹೀಗಾಗಿ ಧಂಖರ್ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT