ಆನೆಗಳ ದಾಳಿ 
ದೇಶ

Kerala: ಪ್ರಸಿದ್ಧ ಮಣಕುಲಂಗರ ದೇವಸ್ಥಾನ ಉತ್ಸವದ ವೇಳೆ ರೊಚ್ಚಿಗೆದ್ದ ಆನೆಗಳು; 3 ಸಾವು, 12 ಜನರ ಸ್ಥಿತಿ ಗಂಭೀರ, Video!

ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ಕೋಝಿಕ್ಕೋಡ್: ಕೇರಳ ದೇವಸ್ಥಾನದ ಉತ್ಸವದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಓಡಾಡಿದ್ದರಿಂದ ಮೂವರು ಮೃತಪಟ್ಟಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೊಝಿಕೋಡ್‌ನ ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕುಲಂಗರ ದೇವಸ್ಥಾನದಲ್ಲಿ ಉತ್ಸವದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ಕುರುವಂಗಾಡ್ ಮೂಲದ ಲೀಲಾ, ಅಮ್ಮುಕುಟ್ಟಿ ಮತ್ತು ರಾಜನ್ ಎಂದು ಗುರುತಿಸಲಾಗಿದ್ದು ಗಾಯಾಳುಗಳನ್ನು ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಏಳು ಮಹಿಳೆಯರು, ಓರ್ವ ಹುಡುಗಿ ಮತ್ತು ನಾಲ್ವರು ಪುರುಷರನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಈ ಘಟನೆ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ. ದೊಡ್ಡ ಶಬ್ದದೊಂದಿಗೆ ಪಟಾಕಿಗಳನ್ನು ಸಿಡಿಸಿದಾಗ ಈ ಘಟನೆ ಸಂಭವಿಸಿದೆ. ಪೀತಾಂಬರನ್ ಮತ್ತು ಗೋಕುಲ್ ಎಂಬ ಆನೆಗಳಿಂದ ಈ ಘಟನೆ ನಡೆದಿದೆ. ಪಟಾಕಿ ಪ್ರದರ್ಶನದ ಸದ್ದಿಗೆ ಹತ್ತಿರದ ಕಟ್ಟಡಗಳ ಛಾವಣಿಗಳು ಸಹ ಅಲುಗಾಡಿದವು. ಅಷ್ಟರಲ್ಲಿ ಒಂದು ಆನೆ ಒಳಗೆ ಬಂತು. ಈ ಆನೆ ಹತ್ತಿರದಲ್ಲಿ ನಿಂತಿದ್ದ ಮತ್ತೊಂದು ಆನೆಯ ಮೇಲೆ ದಾಳಿ ಮಾಡಿತು. ಮತ್ತು ನಂತರ ಎರಡು ಆನೆಗಳು ಮುಖಾಮುಖಿಯಾದವು. ಈ ವೇಳೆ ಭಯಭೀತರಾದ ಜನರು ಓಡಲು ಪ್ರಾರಂಭಿಸಿದಾಗ ಕಾಲ್ತುಳಿತವಾಗಿದೆ. ಆನೆ ದಾಳಿಯಿಂದ ದೇವಸ್ವಂ ಕಚೇರಿಗೆ ಹಾನಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT