ಕುಂಭಮೇಳ online desk
ದೇಶ

ಕುಂಭಮೇಳದ ಬಗ್ಗೆ ತಪ್ಪು ಮಾಹಿತಿ: 53 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ

ಹಳೆಯ ವಿಡಿಯೋಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಮಹಾ ಕುಂಭ ಮೇಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶ ಪೊಲೀಸರು 53 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ನಕಲಿ ಸುದ್ದಿಗಳನ್ನು ನಿಗ್ರಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಹಳೆಯ ವೀಡಿಯೊಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡಿದ ಪೋಸ್ಟ್‌ಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ರಮ ಕೈಗೊಳ್ಳಲು ಉತ್ತರ ಪ್ರದೇಶ ಪೊಲೀಸರು ಮತ್ತು ತಜ್ಞ ಸಂಸ್ಥೆಗಳು ನಿರಂತರ ಸೈಬರ್ ಗಸ್ತು ನಡೆಸುವುದನ್ನು ಒಳಗೊಂಡ ಸಮಗ್ರ ಕಾರ್ಯತಂತ್ರವನ್ನು ಇಲಾಖೆ ರೂಪಿಸಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.

ಫೆಬ್ರವರಿ 13 ರಂದು, ಸೈಬರ್ ಮೇಲ್ವಿಚಾರಣೆಯಲ್ಲಿ ಮಹಾ ಕುಂಭ ಮೇಳಕ್ಕೆ ತಪ್ಪಾಗಿ ಲಿಂಕ್ ಮಾಡಲಾದ ಎರಡು ದಾರಿತಪ್ಪಿಸುವ ವಿಡಿಯೋಗಳು ಪತ್ತೆಯಾಗಿವೆ. ಈಜಿಪ್ಟ್‌ನಲ್ಲಿ ನಡೆದ ಬೆಂಕಿ ಅವಘಡದ ವಿಡಿಯೋವನ್ನು ಮಹಾ ಕುಂಭ ಬಸ್ ನಿಲ್ದಾಣದಲ್ಲಿ ಬೆಂಕಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದ್ದು, 40-50 ವಾಹನಗಳು ನಾಶವಾಗಿವೆ ಎಂದು ಹೇಳಲಾಗಿದೆ.

ತನಿಖೆಯ ನಂತರ ಈ ದೃಶ್ಯಗಳು ವಾಸ್ತವವಾಗಿ ಕೈರೋದಲ್ಲಿ ಜುಲೈ 14, 2020 ರಂದು ಸಂಭವಿಸಿದ ಅಗ್ನಿ ಅವಘಡದ ದೃಶ್ಯಗಳಾಗಿದ್ದವು ಎಂದು ಅವರು ತಿಳಿಸಿದ್ದಾರೆ.

ಪ್ರಯಾಗರಾಜ್ ಕುಂಭಮೇಳ ಆಡಳಿತ ಮತ್ತು ಉತ್ತರ ಪ್ರದೇಶ ಪೊಲೀಸರು ತಪ್ಪು ಮಾಹಿತಿಯನ್ನು ಹರಡಲು ಕಾರಣರಾದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT