ರಣವೀರ್ ಅಲ್ಹಾಬಾದಿಯಾ 
ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ತಮ್ಮ ವಿರುದ್ಧದ ಎಫ್ಐಆರ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಣವೀರ್ ಅಲ್ಹಾಬಾದಿಯಾ

ಅಸ್ಸಾಂ ಪೊಲೀಸರು ವಿಚಾರಣೆಗಾಗಿ ಅಲ್ಹಾಬಾದಿಯಾ ಅವರಿಗೆ ಇಂದು ಸಮನ್ಸ್ ನೀಡಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ಚಂದ್ರಚೂಡ್ ನ್ಯಾಯಾಲಯವನ್ನು ಕೋರಿದರು.

ನವದೆಹಲಿ: ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್‌ ರಿಯಾಲಿಟಿ ಶೋನಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಚಾರವಾಗಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ವಿರುದ್ಧ ರಣವೀರ್ ಅಲ್ಹಾಬಾದಿಯಾ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಅಲ್ಹಾಬಾದಿಯಾ ಪರ ವಕೀಲ ಅಭಿನವ್ ಚಂದ್ರಚೂಡ್ ಅವರ ಅರ್ಜಿಯನ್ನು ಗಮನಿಸಿತು. ಮುಂದಿನ ಎರಡ್ಮೂರು ದಿನಗಳಲ್ಲಿ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿತು.

ಅಸ್ಸಾಂ ಪೊಲೀಸರು ವಿಚಾರಣೆಗಾಗಿ ಅಲ್ಹಾಬಾದಿಯಾ ಅವರಿಗೆ ಇಂದು ಸಮನ್ಸ್ ನೀಡಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ಚಂದ್ರಚೂಡ್ ನ್ಯಾಯಾಲಯವನ್ನು ಕೋರಿದರು.

ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್ ಶೋ 'ಇಂಡಿಯಾಸ್ ಗಾಟ್ ಲ್ಯಾಟೆಂಟ್‌'ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಕುರಿತು ಪಾಡ್‌ಕಾಸ್ಟರ್ ಅಲ್ಹಾಬಾದಿಯಾ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈ ವಿಡಿಯೋ ಕ್ಲಿಪ್ ವೈರಲ್ ಆಗುತ್ತಲೇ ವಿವಾದ ಭುಗಿಲೆದ್ದಿತ್ತು. ದೇಶದ ವಿವಿಧ ಭಾಗಗಳಲ್ಲಿ ಅವರ ಮತ್ತು ಇತರರ ವಿರುದ್ಧ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT