ದೆಹಲಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಜನಸಮೂಹ 
ದೇಶ

Delhi metro ನಿಲ್ದಾಣದಲ್ಲಿ ಹೈ ಡ್ರಾಮಾ: ಟಿಕೆಟ್ ಇಲ್ಲ.. ಸೆಕ್ಯುರಿಟಿ ಚೆಕ್ ಇಲ್ಲ...; ಏಕಾಏಕಿ ನುಗ್ಗಿದ ಜನ, ಕೈ ಕಟ್ಟಿ ನಿಂತ ಭದ್ರತಾ ಸಿಬ್ಬಂದಿ, Video Viral

ಈ ವಿಡಿಯೋ ಯಾವಾಗ ಸೆರೆ ಹಿಡಿದದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ನವದೆಹಲಿ: ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಯಾವುದೇ ಭದ್ರತೆ ಇಲ್ಲದೆ ಜನಸಮೂಹವೊಂದು ದೆಹಲಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ಮೆಟ್ರೋ ರೈಲು ದರ ಏರಿಕೆ ವ್ಯಾಪಕ ಚರ್ಚೆಗೀಡಾಗಿರುವಂತೆಯೇ ಬೆಂಗಳೂರು ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಅತ್ತ ದೆಹಲಿಯಲ್ಲಿ ಜನಸಮೂಹವೊಂದು ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದು, ಟಿಕೆಟ್ ಇಲ್ಲದೆ ಸೆಕ್ಯುರಿಟಿ ಚೆಕ್ ಇಲ್ಲದೇ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಚೆ ವರ್ತಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ ಗಳ ಅನ್ವಯ ಇತ್ತೀಚೆಗೆ ನಡೆದ ಶಬ್ ಇ ಬರಾತ್ ಹಬ್ಬದ ದಿನದಂದೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸಾಮೂಹಿಕ ಪ್ರಾರ್ಥನೆಗೆ ಬಂದ ಯುವಕರು ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ಕುಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದ್ದು, ಈ ವಿಡಿಯೋ ಯಾವಾಗ ಸೆರೆ ಹಿಡಿದದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅಂತೆಯೇ ಇಷ್ಟು ಜನ ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದಾಗ ಅಲ್ಲಿದ್ದ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!