ನ್ಯೂ ಇಂಡಿಯಾ ಬ್ಯಾಂತ್ 
ದೇಶ

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ವಂಚನೆ: 122 ಕೋಟಿ ರೂ ದುರುಪಯೋಗ; ಜನರಲ್ ಮ್ಯಾನೇಜರ್ ವಿರುದ್ಧ ದೂರು ದಾಖಲು

ನ್ಯೂ ಇಂಡಿಯಾ ಕೋಆಪರೇಟಿವ್ ಬ್ಯಾಂಕ್ ಹೊಸ ವ್ಯವಹಾರ ನಡೆಸುವುದು, ಹಣ ಹಿಂಪಡೆಯುವುದನ್ನು ಆರ್‌ಬಿಐ ಶುಕ್ರವಾರ ನಿರ್ಬಂಧಿಸಿತ್ತು. ಇದಾದ ಬೆನ್ನಲ್ಲೆ ಈ ವಂಚನೆ ಆರೋಪ ಕೇಳಿಬಂದಿದೆ.

ಮುಂಬೈ: ರೂ.122 ಕೋಟಿ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂ ಇಂಡಿಯಾ ಬ್ಯಾಂಕ್ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ಅಕೌಂಟೆಂಟ್ ಹಾಗೂ ಆತನ ಸಹಚರನ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮುಂದಿನ ವಿಚಾರಣೆಗಾಗಿ ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನ್ಯೂ ಇಂಡಿಯಾ ಕೋಆಪರೇಟಿವ್ ಬ್ಯಾಂಕ್ ಹೊಸ ವ್ಯವಹಾರ ನಡೆಸುವುದು, ಹಣ ಹಿಂಪಡೆಯುವುದನ್ನು ಆರ್‌ಬಿಐ ಶುಕ್ರವಾರ ನಿರ್ಬಂಧಿಸಿತ್ತು. ಇದಾದ ಬೆನ್ನಲ್ಲೆ ಈ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಂಕ್‌ನ ಕಾರ್ಯನಿರ್ವಾಹಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೇವರ್ಷಿ ಘೋಷ್ ಶುಕ್ರವಾರ ಮಧ್ಯ ಮುಂಬೈನ ದಾದರ್ ಪೊಲೀಸ್ ಠಾಣೆಗೆ ಬಂದು ಹಣ ದುರುಪಯೋಗದ ಬಗ್ಗೆ ದೂರು ದಾಖಲಿಸಿದ್ದಾರೆ.

ಆ ದೂರಿನ ಪ್ರಕಾರ ಬ್ಯಾಂಕಿನ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ಅಕೌಂಟೆಂಟ್ ಹಿತೇಶ್ ಮೆಹ್ತಾ ಅವರು ತನ್ನ ಸಹಚರರೊಂದಿಗೆ ಸೇರಿ ಸಂಚು ರೂಪಿಸಿ ಪ್ರಭಾದೇವಿ ಮತ್ತು ಗೊರೆಗಾಂವ್ ಬ್ಯಾಂಕಿನ ಕಛೇರಿಗಳ ತಿಜೋರಿಯಲ್ಲಿಟ್ಟಿದ್ದ ಹಣದಿಂದ ರೂ. 122 ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಮೆಹ್ತಾ ಮತ್ತಿತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ಗಳು 316 (5) (ಸಾರ್ವಜನಿಕ ಸೇವಕರು, ಬ್ಯಾಂಕರ್‌ಗಳು ಮತ್ತು ಇತರ ಕ್ರಿಮಿನಲ್ ನಂಬಿಕೆ ಉಲ್ಲಂಘನೆ), 61 (2) (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ತನಿಖೆಯ ವ್ಯಾಪ್ತಿಯನ್ನು ಪರಿಗಣಿಸಿ, ನಂತರ ಪ್ರಕರಣವನ್ನು ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ಅದು ತನಿಖೆಯನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು. ಈ ಸಹಕಾರಿ ಬ್ಯಾಂಕ್‌ನ ಹೆಚ್ಚಿನ 28 ಶಾಖೆಗಳು ಮುಂಬೈನಲ್ಲಿದ್ದು, ನೆರೆಯ ಗುಜರಾತ್‌ನ ಸೂರತ್‌ನಲ್ಲಿ ಎರಡು ಮತ್ತು ಪುಣೆಯಲ್ಲಿ ಒಂದನ್ನು ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ