ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕದಿಂದ 2ನೇ ಹಂತದ ಗಡಿಪಾರು: 119 ಅಕ್ರಮ ಭಾರತೀಯ ವಲಸಿಗರು ತಾಯ್ನಾಡಿಗೆ ಇಂದು ವಾಪಸ್

119 ಅಕ್ರಮ ಭಾರತೀಯ ವಲಸಿಗರ ಎರಡನೇ ತಂಡವನ್ನು ಹೊತ್ತ ಅಮೆರಿಕದ ವಿಮಾನ ಫೆಬ್ರವರಿ 15ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ರಾತ್ರಿ 10 ಗಂಟೆಗೆ ಇಳಿಯಲಿದೆ.

ನವದೆಹಲಿ: ಅಮೆರಿಕದಲ್ಲಿರುವ ಭಾರತೀಯ ಅಕ್ರಮ ವಲಸಿಗರ 2ನೇ ಹಂತದ ಗಡಿಪಾರು ಪ್ರಕ್ರಿಯೆ ಆರಂಭವಾಗಿದೆ. ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಎರಡು ವಿಮಾನಗಳು ಅಮೃತಸರದ ಗುರು ರಾಮ ದಾಸ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 15 ಹಾಗೂ 16ರಂದು ಬಂದಿಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

119 ಅಕ್ರಮ ಭಾರತೀಯ ವಲಸಿಗರ ಎರಡನೇ ತಂಡವನ್ನು ಹೊತ್ತ ಅಮೆರಿಕದ ವಿಮಾನ ಫೆಬ್ರವರಿ 15ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ರಾತ್ರಿ 10 ಗಂಟೆಗೆ ಇಳಿಯಲಿದೆ. ಅಕ್ರಮ ಭಾರತೀಯ ವಲಸಿಗರ ಪೈಕಿ ಪಂಜಾಬ್‌ನ 67, ಹರಿಯಾಣದ 33, ಗುಜರಾತಿನ 8, ಉತ್ತರಪ್ರದೇಶದ ಮೂವರು, ಮಹಾರಾಷ್ಟ್ರ, ರಾಜಸ್ಥಾನ, ಗೋವಾದ ತಲಾ ಇಬ್ಬರು ಹಾಗೂ ಹಿಮಾಚಲಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ತಲಾ ಒಬ್ಬರು ಇದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಲ್ಲದೆ, ಇನ್ನಷ್ಟು ಅಕ್ರಮ ಭಾರತೀಯರ ವಲಸಿಗರನ್ನು ಹೊತ್ತ ಇನ್ನೊಂದು ವಿಮಾನ ಫೆಬ್ರವರಿ 16ರಂದು ಭಾರತಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಕಳೆದ ವಾರ 104 ಅಕ್ರಮ ಭಾರತೀಯ ವಲಸಿಗರಿದ್ದ ವಿಮಾನ ಅಮೃತಸರದ ಶ್ರೀ ಗುರು ರಾಮದಾಸ್ ಜಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ಈ ವೇಳೆ ಜನರ ಕೈಗೆ ಕೋಳಗಳನ್ನು ತೊಡಿಸಿ ಕರೆತಂದಿದ್ದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.ಅದರಲ್ಲಿ ಪಂಜಾಬ್‌ನ 30 ಮಂದಿ, ಹರ್ಯಾಣ, ಗುಜರಾತ್‌ನ ತಲಾ 33 ಮಂದಿ, ಮಹಾರಾಷ್ಟ್ರ, ಉತ್ತರಪ್ರದೇಶ ತಲಾ 3 ಮಂದಿ ಹಾಗೂ ಚಂಡಿಗಢದ ಇಬ್ಬರು ಇದ್ದರು.

ವಿವಿಧ ದೇಶಗಳಿಂದ ಬಂದಿರುವ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಡೊನಾಲ್ಡ್ ಟ್ರಂಪ್ ನೇತೃತ್ವದ ಸರಕಾರ ತೆಗೆದುಕೊಂಡ ಕ್ರಮದ ಭಾಗವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಗಡಿಪಾರು ವಿಚಾರವಾಗಿ, ಅಮೆರಿಕ ಸೇರಿದಂತೆ ವಿದೇಶಗಳಲ್ಲಿ ‘ಕಾನೂನುಬಾಹಿರವಾಗಿ’ ವಾಸಿಸುವ ಭಾರತೀಯ ಪ್ರಜೆಗಳ ಕಾನೂನುಬದ್ಧ ಮರಳುವಿಕೆಗೆ ಭಾರತ ಮುಕ್ತವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಈ ಹಿಂದೆ ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT