ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕದಿಂದ 2ನೇ ಹಂತದ ಗಡಿಪಾರು: 119 ಅಕ್ರಮ ಭಾರತೀಯ ವಲಸಿಗರು ತಾಯ್ನಾಡಿಗೆ ಇಂದು ವಾಪಸ್

119 ಅಕ್ರಮ ಭಾರತೀಯ ವಲಸಿಗರ ಎರಡನೇ ತಂಡವನ್ನು ಹೊತ್ತ ಅಮೆರಿಕದ ವಿಮಾನ ಫೆಬ್ರವರಿ 15ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ರಾತ್ರಿ 10 ಗಂಟೆಗೆ ಇಳಿಯಲಿದೆ.

ನವದೆಹಲಿ: ಅಮೆರಿಕದಲ್ಲಿರುವ ಭಾರತೀಯ ಅಕ್ರಮ ವಲಸಿಗರ 2ನೇ ಹಂತದ ಗಡಿಪಾರು ಪ್ರಕ್ರಿಯೆ ಆರಂಭವಾಗಿದೆ. ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಎರಡು ವಿಮಾನಗಳು ಅಮೃತಸರದ ಗುರು ರಾಮ ದಾಸ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 15 ಹಾಗೂ 16ರಂದು ಬಂದಿಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

119 ಅಕ್ರಮ ಭಾರತೀಯ ವಲಸಿಗರ ಎರಡನೇ ತಂಡವನ್ನು ಹೊತ್ತ ಅಮೆರಿಕದ ವಿಮಾನ ಫೆಬ್ರವರಿ 15ರಂದು ಅಮೃತಸರ ವಿಮಾನ ನಿಲ್ದಾಣದಲ್ಲಿ ರಾತ್ರಿ 10 ಗಂಟೆಗೆ ಇಳಿಯಲಿದೆ. ಅಕ್ರಮ ಭಾರತೀಯ ವಲಸಿಗರ ಪೈಕಿ ಪಂಜಾಬ್‌ನ 67, ಹರಿಯಾಣದ 33, ಗುಜರಾತಿನ 8, ಉತ್ತರಪ್ರದೇಶದ ಮೂವರು, ಮಹಾರಾಷ್ಟ್ರ, ರಾಜಸ್ಥಾನ, ಗೋವಾದ ತಲಾ ಇಬ್ಬರು ಹಾಗೂ ಹಿಮಾಚಲಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ತಲಾ ಒಬ್ಬರು ಇದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಲ್ಲದೆ, ಇನ್ನಷ್ಟು ಅಕ್ರಮ ಭಾರತೀಯರ ವಲಸಿಗರನ್ನು ಹೊತ್ತ ಇನ್ನೊಂದು ವಿಮಾನ ಫೆಬ್ರವರಿ 16ರಂದು ಭಾರತಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಕಳೆದ ವಾರ 104 ಅಕ್ರಮ ಭಾರತೀಯ ವಲಸಿಗರಿದ್ದ ವಿಮಾನ ಅಮೃತಸರದ ಶ್ರೀ ಗುರು ರಾಮದಾಸ್ ಜಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ಈ ವೇಳೆ ಜನರ ಕೈಗೆ ಕೋಳಗಳನ್ನು ತೊಡಿಸಿ ಕರೆತಂದಿದ್ದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.ಅದರಲ್ಲಿ ಪಂಜಾಬ್‌ನ 30 ಮಂದಿ, ಹರ್ಯಾಣ, ಗುಜರಾತ್‌ನ ತಲಾ 33 ಮಂದಿ, ಮಹಾರಾಷ್ಟ್ರ, ಉತ್ತರಪ್ರದೇಶ ತಲಾ 3 ಮಂದಿ ಹಾಗೂ ಚಂಡಿಗಢದ ಇಬ್ಬರು ಇದ್ದರು.

ವಿವಿಧ ದೇಶಗಳಿಂದ ಬಂದಿರುವ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಡೊನಾಲ್ಡ್ ಟ್ರಂಪ್ ನೇತೃತ್ವದ ಸರಕಾರ ತೆಗೆದುಕೊಂಡ ಕ್ರಮದ ಭಾಗವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಗಡಿಪಾರು ವಿಚಾರವಾಗಿ, ಅಮೆರಿಕ ಸೇರಿದಂತೆ ವಿದೇಶಗಳಲ್ಲಿ ‘ಕಾನೂನುಬಾಹಿರವಾಗಿ’ ವಾಸಿಸುವ ಭಾರತೀಯ ಪ್ರಜೆಗಳ ಕಾನೂನುಬದ್ಧ ಮರಳುವಿಕೆಗೆ ಭಾರತ ಮುಕ್ತವಾಗಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್.ಜೈಶಂಕರ್ ಈ ಹಿಂದೆ ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT