ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ 
ದೇಶ

ದೆಹಲಿ ಕಾಲ್ತುಳಿತದಲ್ಲಿ 18 ಮಂದಿ ಸಾವು: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಭಾನುವಾರ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಎಷ್ಟು ಜನರು ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಪ್ರತಿ ಗಂಟೆಗೆ 1500 ಟಿಕೆಟ್‌ಗಳು ಮಾರಾಟವಾಗುತ್ತಿವೆ ಎಂಬುದು ರೈಲ್ವೆ ಅಧಿಕಾರಿಗಳಿಗೆ ಚೆನ್ನಾಗಿ ತಿಳಿದಿತ್ತು. ಜನಸಂದಣಿ ನಿರ್ವಹಣೆಗೆ ಸರಿಯಾದ ವ್ಯವಸ್ಥೆ ಮಾಡಬೇಕಿತ್ತು. ದುರದೃಷ್ಟವಶಾತ್, ಯಾವುದೇ ಭದ್ರತಾ ಪಡೆಗಳು ಕಾಣಿಸಲಿಲ್ಲ. ಜನರೇ ಸ್ವತ: ನಿರ್ವಹಣೆ ಮಾಡಿಕೊಳ್ಳಬೇಕಾಗಿತ್ತು. ಇದು ಇಂತಹ ದುರಂತಕ್ಕೆ ಕಾರಣವಾಯಿತು ಎಂದು ಅವರು ಹೇಳಿದರು.

ದೇಶದಲ್ಲಿ ಎರಡು ಹಿಂದೂಸ್ಥಾನಗಳಿವೆ ಎಂದು ಆರೋಪಿಸಿದ ಅವರು, ಒಂದು ಕಡೆ ರಾಜನು ತನ್ನ ಸ್ನೇಹಿತರು ಕುಂಭದಲ್ಲಿ ಸ್ನಾನ ಮಾಡಲು ನೆರವಾಗುತ್ತಾನೆ. ಆದರೆ ಸಾಮಾನ್ಯ ಜನರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಸಾಯುತ್ತಾರೆ ಎಂದು ಹೇಳುವ ಮೂಲಕ ಕುಂಭ ಮೇಳದಲ್ಲಿನ ವಿಐಪಿ ಸಂಸ್ಕೃತಿಯನ್ನೂ ಅವರು ಟೀಕಿಸಿದರು.

ನಿನ್ನೆ ನಡೆದ ಹತ್ಯಾಕಾಂಡ ಘಟನೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಸಚಿವರಿಗೆ ಒಂದು ನಿಮಿಷವೂ ತಮ್ಮ ಸ್ಥಾನದಲ್ಲಿರಲು ಅರ್ಹತೆ ಇಲ್ಲ, ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ರೈಲ್ವೆ ಸಚಿವರು ತಮ್ಮ ಜವಾಬ್ದಾರಿಯಲ್ಲಿ ಸಮರ್ಪಕವಾಗಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಮತ್ತು ಕೇವಲ ರೀಲ್ ಗಳನ್ನು ಸೃಷ್ಟಿಸುತ್ತಿದ್ದು, ಸಾವುಗಳ ಸಂಖ್ಯೆಯನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ.

ಅಶ್ವಿನಿ ವೈಷ್ಣವ್ ಅವರಿಗೆ ಕುರ್ಚಿಯಲ್ಲಿ ಒಂದು ನಿಮಿಷವೂ ಇರುವ ನೈತಿಕ ಹಕ್ಕು ಇಲ್ಲ. ಅವರು ನಾಚಿಕೆಯಿಲ್ಲದೆ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ