ತಮಿಳುನಟ ಯೋಗಿಬಾಬು 
ದೇಶ

ಬೆಂಗಳೂರಿಗೆ ಬರುತ್ತಿದ್ದಾಗ ತಮಿಳುನಟ Yogi babu ಕಾರಿಗೆ ಅಪಘಾತ! ಆಗಿದ್ದೇನು?

ಭಾನುವಾರ ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ವಾಹನವು ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ..

ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ನಟ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಭಾನುವಾರ ಮುಂಜಾನೆ ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ವಾಹನವು ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಯೋಗಿ ಬಾಬು ಅವರ ವಾಹನ ಕಂಟ್ರೋಲ್‌ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದು, ಕಾರು ಅಪಘಾತ ಸಂಬಂಧ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌ ಆಗಿವೆ.

ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ನಟ ಅಪಾಯದಿಂದ ಪಾರು

ಅಪಘಾತದಲ್ಲಿ ನಟ ಯೋಗಿ ಬಾಬು ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಯೋಗಿ ಬಾಬು ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಸ್ಪಷ್ಟನೆ ನೀಡಿದ ನಟ

ಇನ್ನು ಈ ಬಗ್ಗೆ ಸ್ವತಃ ನಟ ಯೋಗಿಬಾಬು ಸಾಮಾಜಿಕ ಮಾಧ್ಯಮಗಳಲ್ಲಿ ಸ್ಪಷ್ಟನೆ ನೀಡಿದ್ದು, 'ಯಾವುದೇ ವಂದಂತಿಗಳನ್ನು ನಂಬಬೇಡಿ. ನಾನು ಕ್ಷೇಮವಾಗಿದ್ದೇನೆ ಎಂದು ತಿಳಿಸಿದ್ದಾರೆ.

'ಅದು ಯಾವುದೋ ಕಂಪನಿ ಕಾರು. ಬ್ಯಾರಿಕೇಡ್‌ಗೆ ಚೂರು ತಾಗಿ ಘಟನೆ ನಡೆದಿದೆ ಅಷ್ಟೇ. ಎಲ್ಲರೂ ಕ್ಷೇಮವಾಗಿದ್ದೇವೆ, ಯಾರಿಗೂ ಯಾವುದೇ ಅನಾಹುತ ನಡೆದಿಲ್ಲ. ನಾನು ಅಲ್ಲಿ ಏನಾಗಿದೆ ಎಂಬುದನ್ನು ನೋಡಿ ಕೊನೆಗೆ ಎಲ್ಲರನ್ನೂ ಅಲ್ಲಿಂದ ಕಳಿಸಿಕೊಟ್ಟೆವು. ಸುಮ್ಮನೆ ಈ ಬಗ್ಗೆ ಏನೇನೋ ವದಂತಿಗಳು ಹಬ್ಬುತ್ತಿದೆ. ಅದೆಲ್ಲವೂ ಸುಳ್ಳು, ದಯವಿಟ್ಟು ಯಾರೂ ವದಂತಿಗಳನ್ನು ನಂಬಬೇಡಿ" ಎಂದು ಯೋಗಿ ಬಾಬು ಅವರು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT