ರಣವೀರ್ ಅಲ್ಹಾಬಾದಿಯಾ 
ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಅಲ್ಹಾಬಾದಿಯಾ, ಸಮಯ್ ರೈನಾಗೆ ಮಹಾ ಪೊಲೀಸರಿಂದ ಸಮನ್ಸ್

ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಮುಂಬೈ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ ಹಾಗೂ ಹಾಸ್ಯನಟ ಸಮಯ್ ರೈನಾ ಅವರಿಗೆ ಮುಂಬೈ ಸೈಬರ್ ಕ್ರೈಂ ಪೊಲೀಸರು ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆ.

ವರ್ಚುವಲ್ ಮೂಲಕ ತಮ್ಮ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂಬ ಸಮಯ್ ರೈನಾ ಅವರ ಮನವಿಯನ್ನು ಸೈಬರ್ ಮತ್ತು ಮಾಹಿತಿ ಭದ್ರತಾ ವಿಭಾಗವಾದ ಪೊಲೀಸರು ತಿರಸ್ಕರಿಸಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈನಾ ಅವರ ವೆಬ್ ಶೋ "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನಂತರ ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.

ತಾನು ಅಮೆರಿಕದಲ್ಲಿದ್ದು, ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆ ದಾಖಲಿಸುವಂತೆ ಮಹಾರಾಷ್ಟ್ರ ಸೈಬರ್‌ಗೆ ರೈನಾ ವಿನಂತಿಸಿದ್ದರು. ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ, ಮುಂಬೈ ಪೊಲೀಸರು ರೈನಾ ಅವರಿಗೆ ಫೆಬ್ರವರಿ 17ಕ್ಕು ಮುನ್ನ ಖಾರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ವಿದೇಶದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಮಾಹಿತಿ ನೀಡಿದ್ದರು.

ಇನ್ನು ಯೂಟ್ಯೂಬ್‌ನಲ್ಲಿ ಜನಪ್ರಿಯರಾಗಿರುವ ಅಲ್ಹಾಬಾದಿಯಾ ಅವರಿಗೂ ಮಹಾರಾಷ್ಟ್ರ ಪೊಲೀಸರು ನೋಟಿಸ್ ನೀಡಿದ್ದು, ಫೆಬ್ರವರಿ 24 ರಂದು ವಿಚಾರಣಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಈಗ ಫೆಬ್ರವರಿ 24 ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT