ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮ 
ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: NCW ಮುಂದೆ ಹಾಜರಾಗಲು ವಿಫಲ; Youtubers ಗೆ ಮತ್ತೆ ಸಮನ್ಸ್

ವೈಯಕ್ತಿಕ ಸುರಕ್ಷತೆ, ವಿದೇಶ ಪ್ರಯಾಣದ ಬದ್ಧತೆಗಳು ಮತ್ತು ಇತರ ಸವಾಲುಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಯೂಟ್ಯೂಬರ್‌ಗಳು ಹಾಜರಾಗಲು ವಿಫಲವಾಗಿದ್ದು, ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ.

ರಣವೀರ್ ಅಲ್ಹಾಬಾದಿಯಾ, ಸಮಯ್ ರೈನಾ, ಅಪೂರ್ವ ಮುಖಿಜಾ, ಜಸ್ಪ್ರೀತ್ ಸಿಂಗ್, ಆಶಿಶ್ ಚಂಚಲಾನಿ, ತುಷಾರ್ ಪೂಜಾರಿ, ಸೌರಭ್ ಬೋತ್ರಾ ಮತ್ತು ಬಲರಾಜ್ ಘಾಯ್ ವಿರುದ್ಧ ಮಹಿಳಾ ಆಯೋಗ ಫೆಬ್ರುವರಿ 17 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.

ವೈಯಕ್ತಿಕ ಸುರಕ್ಷತೆ, ಪೂರ್ವ ಪ್ರಯಾಣದ ಬದ್ಧತೆಗಳು ಮತ್ತು ಇತರ ಲಾಜಿಸ್ಟಿಕ್ ಸವಾಲುಗಳ ಮೇಲಿನ ಕಳವಳಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ರಣವೀರ್ ಅಲ್ಹಾಬಾದಿಯಾ ಅವರು ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡುವಂತೆ ವಿನಂತಿಸಿದ್ದಾರೆ. ಹೀಗಾಗಿ, ಆಯೋಗವು ತನ್ನ ವಿಚಾರಣೆಯನ್ನು ಮಾರ್ಚ್ 6 ಕ್ಕೆ ನಿಗದಿ ಮಾಡಿದೆ. ಸುರಕ್ಷತೆಯ ಕಾಳಜಿಯನ್ನು ವ್ಯಕ್ತಪಡಿಸಿದ ಮುಖಿಜಾ ಅವರ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮರುನಿಗದಿ ಮಾಡಲಾಗಿದೆ.

ಸಮಯ್ ರೈನಾ ಅವರು ಪೂರ್ವ ನಿಗದಿಯಂತೆ ಸದ್ಯ ಅಮೆರಿಕದಲ್ಲಿದ್ದು, ಅಲ್ಲಿಂದ ಹಿಂತಿರುಗಿದ ಬಳಿಕ ಎನ್‌ಸಿಡಬ್ಲ್ಯು ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಾಗಿ, ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ. ಜಸ್ಪ್ರೀತ್ ಸಿಂಗ್ ಕೂಡ ಸದ್ಯ ಪ್ಯಾರಿಸ್ ಪ್ರವಾಸದಲ್ಲಿದ್ದು, ಮಾರ್ಚ್ 10ರೊಳಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ.

ಅನಾರೋಗ್ಯದ ಕಾರಣಕ್ಕಾಗಿ ಚಂಚಲಾನಿ ಅವರ ಪರವಾಗಿ ವಕೀಲರು ಹಾಜರಾಗಿದ್ದರು. ಅವರಿಗೂ ಮಾರ್ಚ್ 6 ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಈಮಧ್ಯೆ, ಸಮನ್ಸ್‌ಗೆ ಪ್ರತಿಕ್ರಿಯಿಸದ ತುಷಾರ್ ಪೂಜಾರಿ, ಸೌರಭ್ ಬೋತ್ರಾ ವಿರುದ್ಧ ಕಿಡಿಕಾರಿದ ಆಯೋಗವು, ಅವರಿಗೂ ಮಾರ್ಚ್ 6ಕ್ಕೆ ಹಾಜರಾಗುವಂತೆ ಸೂಚಿಸಿದೆ. ಬಲರಾಜ್ ಘಾಯ್ ಅವರು ಸದ್ಯ ವಿದೇಶದಲ್ಲಿದ್ದು, ಅಲ್ಲಿಂದ ಹಿಂದಿರುಗಿದ ನಂತರ ಮಾರ್ಚ್ 11 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT