ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮ 
ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: NCW ಮುಂದೆ ಹಾಜರಾಗಲು ವಿಫಲ; Youtubers ಗೆ ಮತ್ತೆ ಸಮನ್ಸ್

ವೈಯಕ್ತಿಕ ಸುರಕ್ಷತೆ, ವಿದೇಶ ಪ್ರಯಾಣದ ಬದ್ಧತೆಗಳು ಮತ್ತು ಇತರ ಸವಾಲುಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಯೂಟ್ಯೂಬರ್‌ಗಳು ಹಾಜರಾಗಲು ವಿಫಲವಾಗಿದ್ದು, ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ.

ರಣವೀರ್ ಅಲ್ಹಾಬಾದಿಯಾ, ಸಮಯ್ ರೈನಾ, ಅಪೂರ್ವ ಮುಖಿಜಾ, ಜಸ್ಪ್ರೀತ್ ಸಿಂಗ್, ಆಶಿಶ್ ಚಂಚಲಾನಿ, ತುಷಾರ್ ಪೂಜಾರಿ, ಸೌರಭ್ ಬೋತ್ರಾ ಮತ್ತು ಬಲರಾಜ್ ಘಾಯ್ ವಿರುದ್ಧ ಮಹಿಳಾ ಆಯೋಗ ಫೆಬ್ರುವರಿ 17 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.

ವೈಯಕ್ತಿಕ ಸುರಕ್ಷತೆ, ಪೂರ್ವ ಪ್ರಯಾಣದ ಬದ್ಧತೆಗಳು ಮತ್ತು ಇತರ ಲಾಜಿಸ್ಟಿಕ್ ಸವಾಲುಗಳ ಮೇಲಿನ ಕಳವಳಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ರಣವೀರ್ ಅಲ್ಹಾಬಾದಿಯಾ ಅವರು ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡುವಂತೆ ವಿನಂತಿಸಿದ್ದಾರೆ. ಹೀಗಾಗಿ, ಆಯೋಗವು ತನ್ನ ವಿಚಾರಣೆಯನ್ನು ಮಾರ್ಚ್ 6 ಕ್ಕೆ ನಿಗದಿ ಮಾಡಿದೆ. ಸುರಕ್ಷತೆಯ ಕಾಳಜಿಯನ್ನು ವ್ಯಕ್ತಪಡಿಸಿದ ಮುಖಿಜಾ ಅವರ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮರುನಿಗದಿ ಮಾಡಲಾಗಿದೆ.

ಸಮಯ್ ರೈನಾ ಅವರು ಪೂರ್ವ ನಿಗದಿಯಂತೆ ಸದ್ಯ ಅಮೆರಿಕದಲ್ಲಿದ್ದು, ಅಲ್ಲಿಂದ ಹಿಂತಿರುಗಿದ ಬಳಿಕ ಎನ್‌ಸಿಡಬ್ಲ್ಯು ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಾಗಿ, ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ. ಜಸ್ಪ್ರೀತ್ ಸಿಂಗ್ ಕೂಡ ಸದ್ಯ ಪ್ಯಾರಿಸ್ ಪ್ರವಾಸದಲ್ಲಿದ್ದು, ಮಾರ್ಚ್ 10ರೊಳಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ.

ಅನಾರೋಗ್ಯದ ಕಾರಣಕ್ಕಾಗಿ ಚಂಚಲಾನಿ ಅವರ ಪರವಾಗಿ ವಕೀಲರು ಹಾಜರಾಗಿದ್ದರು. ಅವರಿಗೂ ಮಾರ್ಚ್ 6 ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಈಮಧ್ಯೆ, ಸಮನ್ಸ್‌ಗೆ ಪ್ರತಿಕ್ರಿಯಿಸದ ತುಷಾರ್ ಪೂಜಾರಿ, ಸೌರಭ್ ಬೋತ್ರಾ ವಿರುದ್ಧ ಕಿಡಿಕಾರಿದ ಆಯೋಗವು, ಅವರಿಗೂ ಮಾರ್ಚ್ 6ಕ್ಕೆ ಹಾಜರಾಗುವಂತೆ ಸೂಚಿಸಿದೆ. ಬಲರಾಜ್ ಘಾಯ್ ಅವರು ಸದ್ಯ ವಿದೇಶದಲ್ಲಿದ್ದು, ಅಲ್ಲಿಂದ ಹಿಂದಿರುಗಿದ ನಂತರ ಮಾರ್ಚ್ 11 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT