ದೆಹಲಿ ಹಂಗಾಮಿ ಮುಖ್ಯಮಂತ್ರಿ ಆತಿಶಿ  
ದೇಶ

ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ನಾಯಕರ ಕೊರತೆ: ಹಂಗಾಮಿ ಸಿಎಂ, ಆಪ್ ನಾಯಕಿ ಆತಿಶಿ ಟೀಕೆ

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಎಎಪಿ ನಾಯಕಿ ಮತ್ತು ದೆಹಲಿಯ ಹಂಗಾಮಿ ಮುಖ್ಯಮಂತ್ರಿ ಅತಿಶಿ, ರಾಷ್ಟ್ರ ರಾಜಧಾನಿಯನ್ನು ಆಳಲು ಬಿಜೆಪಿಗೆ ವಿಶ್ವಾಸಾರ್ಹ ನಾಯಕರ ಕೊರತೆ ಇದೆ ಎಂದರು.

ನವದೆಹಲಿ: ದೆಹಲಿಗೆ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವನ್ನು ಘೋಷಿಸುವಲ್ಲಿ ವಿಳಂಬ ಮಾಡುತ್ತಿರುವ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ (AAP), ದೆಹಲಿಯನ್ನು ಆಳಲು ಕೇಸರಿ ಪಕ್ಷದಲ್ಲಿ ಸಮರ್ಥ ನಾಯಕರ ಕೊರತೆಯಿದೆ ಎಂದು ಟೀಕಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಎಎಪಿ ನಾಯಕಿ ಮತ್ತು ದೆಹಲಿಯ ಹಂಗಾಮಿ ಮುಖ್ಯಮಂತ್ರಿ ಅತಿಶಿ, ರಾಷ್ಟ್ರ ರಾಜಧಾನಿಯನ್ನು ಆಳಲು ಬಿಜೆಪಿಗೆ ವಿಶ್ವಾಸಾರ್ಹ ನಾಯಕರ ಕೊರತೆ ಇದೆ ಎಂದರು.

ಚುನಾವಣಾ ಫಲಿತಾಂಶಗಳು ಪ್ರಕಟವಾಗಿ ಹತ್ತು ದಿನಗಳಾಗಿವೆ. ಫೆಬ್ರವರಿ 9 ರಂದು ಬಿಜೆಪಿ ತನ್ನ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವನ್ನು ಘೋಷಿಸುತ್ತದೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ತಕ್ಷಣ ಪ್ರಾರಂಭಿಸುತ್ತದೆ ಎಂದು ಜನರು ಭಾವಿಸಿದ್ದರು. ಆದರೆ ದೆಹಲಿಯನ್ನು ನಡೆಸಲು ಅವರಿಗೆ ವಿಶ್ವಾಸವಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಆಯ್ಕೆಯಾದ 48 ಬಿಜೆಪಿ ಶಾಸಕರಲ್ಲಿ ಯಾರನ್ನೂ ನಂಬುವುದಿಲ್ಲ. ಮತ್ತು ಬಿಜೆಪಿ ಪಕ್ಷಕ್ಕೆ ಆಡಳಿತದ ಬಗ್ಗೆ ಯಾವುದೇ ದೃಷ್ಟಿಕೋನ ಅಥವಾ ಯೋಜನೆ ಇಲ್ಲ ಎಂದು ಆರೋಪಿಸಿದರು.

ದೆಹಲಿಯ ಜನರನ್ನು ಲೂಟಿ ಮಾಡುವುದಷ್ಟೇ ಬಿಜೆಪಿಗೆ ತಿಳಿದಿದೆ. ಸರ್ಕಾರ ನಡೆಸಲು ಸಮರ್ಥರು ಯಾರೂ ಇಲ್ಲದಿದ್ದರೆ, ಅವರು ಜನರಿಗಾಗಿ ಹೇಗೆ ಕೆಲಸ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಗೆಲುವಿನ ನಂತರ ಕೇಸರಿ ಪಕ್ಷದ ನಾಯಕತ್ವ ನಿರ್ಧಾರ ವಿಳಂಬವಾಗುತ್ತಿದ್ದಂತೆ ಎಎಪಿ ಮತ್ತು ಬಿಜೆಪಿ ನಡುವಿನ ರಾಜಕೀಯ ಯುದ್ಧ ಮತ್ತಷ್ಟು ಉಲ್ಬಣಗೊಳ್ಳಲಿದೆ. ಇತ್ತೀಚೆಗೆ ಮುಕ್ತಾಯಗೊಂಡ 70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಎಎಪಿ 22 ಸ್ಥಾನಗಳನ್ನು ಗೆದ್ದಿತು.

ಫೆಬ್ರವರಿ 5 ರಂದು ನಡೆದ ಮತದಾನದ ನಂತರ ಫೆಬ್ರವರಿ 8 ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು.

2020 ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿತ್ತು, ಆಗ ಬಿಜೆಪಿ ಕೇವಲ ಎಂಟು ಸ್ಥಾನಗಳನ್ನು ಗೆದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ