ಜಿಬಿಎಸ್ ಸಿಂಡ್ರೋಮ್ online desk
ದೇಶ

Guillain Barre Syndrome: ಆಂಧ್ರ ಪ್ರದೇಶದಲ್ಲಿ ಇಬ್ಬರ ಸಾವು; ಸೋಂಕಿತರ ಸಂಖ್ಯೆ 17

GB (Guillain Barre) ಸಿಂಡ್ರೋಮ್ ಎಂಬುದು ಆಟೋ ಇಮ್ಯೂನ್ ನರವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ಈ ಇಬ್ಬರ ಸಾವಿನೊಂದಿಗೆ ವ್ಯಾಪಕ ಅತಂಕ ಸೃಷ್ಟಿಯಾಗಿದೆ.

ಅಮರಾವತಿ: GB (Guillain Barre) ಸಿಂಡ್ರೋಮ್ ಗೆ ನೆರೆಯ ಆಂಧ್ರ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ.

ಕಳೆದ 10 ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ GB (Guillain Barre) ಸಿಂಡ್ರೋಮ್ ಪೀಡಿತ 45 ವರ್ಷದ ಮಹಿಳೆ ಮತ್ತು ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದಾರೆ. GB (Guillain Barre) ಸಿಂಡ್ರೋಮ್ ಎಂಬುದು ಆಟೋ ಇಮ್ಯೂನ್ ನರವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ಈ ಇಬ್ಬರ ಸಾವಿನೊಂದಿಗೆ ವ್ಯಾಪಕ ಅತಂಕ ಸೃಷ್ಟಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆಂಧ್ರ ಪ್ರದೇಶ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್ ಅವರು, 'ಸೋಂಕು ಪೀಡಿತ 45 ವರ್ಷದ ಮಹಿಳೆ ಕಮಲಮ್ಮ ಭಾನುವಾರ ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ (GGH) ಮತ್ತು 10 ವರ್ಷದ ಬಾಲಕ 10 ದಿನಗಳ ಹಿಂದೆ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಆಂಧ್ರ ಪ್ರದೇಶದಲ್ಲಿ 17 ಪ್ರಕರಣ

ಅಂತೆಯೇ ಆಂಧ್ರ ಪ್ರದೇಶದಲ್ಲಿ ಒಟ್ಟಾರೆ 17 GBS ಪ್ರಕರಣಗಳು ದಾಖಲಾಗಿವೆ. ಇದು ಸಾಂಕ್ರಾಮಿಕವಲ್ಲದ ಕಾಯಿಲೆಯಾಗಿದ್ದು, ಒಂದು ಲಕ್ಷದಲ್ಲಿ ಇಬ್ಬರಿಗೆ ಸೋಂಕು ತಗುಲುತ್ತದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಇದು ಹಠಾತ್ ಪ್ರಕರಣಗಳ ಏರಿಕೆಯಲ್ಲ, ಇದು ಸಾಮಾನ್ಯ" ಎಂದು ಯಾದವ್ ತಿಳಿಸಿದರು.

ಕಳೆದ ವರ್ಷ ಅಂದರೆ 2024ರಲ್ಲಿ ಇದೇ ಸೋಂಕಿನಿಂದಾಗಿ ಆಂಧ್ರ ಪ್ರದೇಶದಲ್ಲಿ ಒಟ್ಟು 267 ಪ್ರಕರಣಗಳು ವರದಿಯಾಗಿತ್ತು. ವರ್ಷದ ಮೊದಲಾರ್ಧದಲ್ಲಿ 141 ಪ್ರಕರಣಗಳು ಮತ್ತು ದ್ವಿತೀಯಾರ್ಧದಲ್ಲಿ 126 ಪ್ರಕರಣಗಳು ವರದಿಯಾಗಿವೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT