ದೆಹಲಿ ಗೆಲುವಿನ ಸಂಭ್ರಮದಲ್ಲಿ ಬಿಜೆಪಿ ನಾಯಕರು online desk
ದೇಶ

Delhi CM ಯಾರು? ಫೆಬ್ರವರಿ 19 ರ ಸಭೆ ಮೇಲೆ ಎಲ್ಲರ ಕಣ್ಣು; ನಡೆಯಲಿದೆಯಾ ಅಚ್ಚರಿಯ ಆಯ್ಕೆ? ಹೆಚ್ಚಿದ ಕುತೂಹಲ!

ಸಿಎಂ ಪದಗ್ರಹಣಕ್ಕಾಗಿ ರಾಮಲೀಲಾ ಮೈದಾನವನ್ನು ಅಲಂಕರಿಸಲಾಗುತ್ತಿದೆ. ಇದಕ್ಕೂ ಮೊದಲು, ಗುರುವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಲಾಗಿತ್ತು ಆದರೆ ಅದನ್ನು ಬೆಳಿಗ್ಗೆ 11 ಗಂಟೆಗೆ ಮರು ನಿಗದಿಪಡಿಸಲಾಗಿದೆ.

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ನಾಳೆ ತೆರೆಬೀಳುವ ಸಾಧ್ಯತೆ ಇದೆ.

ಫೆ.19 ರಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನಂತರ ಸಿಎಂ ಹೆಸರನ್ನು ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಗುರುವಾರ ದೆಹಲಿಯ ನೂತನ ಸಿಎಂ ಮತ್ತು ಸಚಿವ ಸಂಪುಟ ಪ್ರತಿಷ್ಠಿತ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ.

ಸಿಎಂ ಪದಗ್ರಹಣಕ್ಕಾಗಿ ರಾಮಲೀಲಾ ಮೈದಾನವನ್ನು ಅಲಂಕರಿಸಲಾಗುತ್ತಿದೆ. ಇದಕ್ಕೂ ಮೊದಲು, ಗುರುವಾರ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಿಗದಿಪಡಿಸಲಾಗಿತ್ತು ಆದರೆ ಅದನ್ನು ಬೆಳಿಗ್ಗೆ 11 ಗಂಟೆಗೆ ಮರು ನಿಗದಿಪಡಿಸಲಾಗಿದೆ.

ಫೆಬ್ರವರಿ 8 ರಂದು ಪ್ರಕಟವಾದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ, ಬಿಜೆಪಿ 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗಳಿಸಿ, 26 ವರ್ಷಗಳ ನಂತರ ನಗರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಎಎಪಿ ಕೇವಲ 22 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಗೆ ಎದುರಿಸಿದ್ದು, ಈಗ ಮುಖ್ಯಮಂತ್ರಿ ಯಾರು ಎಂಬ ಊಹಾಪೋಹಗಳು ತೀವ್ರಗೊಂಡಿವೆ.

ಮುಂಚೂಣಿಯಲ್ಲಿರುವ ಹೆಸರುಗಳು

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ; ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ; ಮತ್ತು ಪವನ್ ಶರ್ಮಾ, ಆಶಿಶ್ ಸೂದ್, ರೇಖಾ ಗುಪ್ತಾ ಮತ್ತು ಶಿಖಾ ರೈ ಅವರಂತಹ ಇತರ ನಾಯಕರ ಹೆಸರುಗಳು ಸಿಎಂ ಸ್ಥಾನಕ್ಕೆ ಮುಂಚೂಣಿಯಲ್ಲಿವೆ. ಬವಾನಾ (ಎಸ್‌ಸಿ) ಸ್ಥಾನದ ಶಾಸಕ ರವೀಂದರ್ ಇಂದ್ರಜ್ ಸಿಂಗ್ ಮತ್ತು ಮೊದಲ ಬಾರಿಗೆ ಬಿಜೆಪಿಯಿಂದ ಮದೀಪುರ (ಎಸ್‌ಸಿ) ಸ್ಥಾನವನ್ನು ಗೆದ್ದ ಕೈಲಾಶ್ ಗಂಗ್ವಾಲ್ ಅವರ ಹೆಸರುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಬಿಜೆಪಿ ನಾಯಕತ್ವ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ "ಅಚ್ಚರಿಯ ಅಭ್ಯರ್ಥಿ"ಯನ್ನು ಆಯ್ಕೆ ಮಾಡಬಹುದು ಎಂದು ಪಕ್ಷದೊಳಗಿನ ಹಲವರು ಹೇಳುತ್ತಿದ್ದಾರೆ. ಇದು ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಪಕ್ಷ ಆರಿಸಿಕೊಂಡ ತಂತ್ರವಾಗಿದೆ.

ಪಕ್ಷದ ಆಂತರಿಕ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಹೆಸರುಗಳು - ರಾಜಧಾನಿಯಲ್ಲಿನ ಪ್ರತಿಯೊಂದು ಪ್ರಬಲ ಜಾತಿ ಮತ್ತು ಸಮುದಾಯ ಗುಂಪುಗಳಿಂದ ಪ್ರಾತಿನಿಧ್ಯದೊಂದಿಗೆ - "ಅನುಭವ ಮತ್ತು ಯುವಕರನ್ನು ಒಳಗೊಂಡಿರುವ ಸಾಧ್ಯತೆಯಿದೆ.

"ಇಂದು ದೆಹಲಿ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಒಂದು ಪ್ರಮುಖ ಸಾಂಸ್ಥಿಕ ಸಭೆ ನಡೆದಿದೆ. "ಈ ಸಭೆಯಲ್ಲಿ, ಸಂಸ್ಥೆಯ ಮುಂಬರುವ ಚಟುವಟಿಕೆಗಳು, ಕಾರ್ಯಕ್ರಮಗಳು ಮತ್ತು ಅಭಿಯಾನಗಳ ಕುರಿತು ವಿವರವಾದ ಚರ್ಚೆ ನಡೆಯಿತು," ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಮಾಹಿತಿ ನೀಡಿದ್ದಾರೆ.

ಸಚ್‌ದೇವ ಅವರೊಂದಿಗೆ ಮೈದಾನವನ್ನು ಪರಿಶೀಲಿಸಿದ ನಂತರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದಾರೆ ಮತ್ತು ನಗರದಾದ್ಯಂತ ಜನರು ಗುರುವಾರ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದಷ್ಟೇ ಹೇಳಿದ್ದು ಕುತೂಹಲ ಹೆಚ್ಚಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಚುಗ್, ದೆಹಲಿಯ ಜನತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಶೀರ್ವದಿಸಿದ್ದಾರೆ, ಅವರನ್ನು "ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಎಲ್ಲಾ ನಾಗರಿಕರು ನಂಬಿದ್ದಾರೆ" ಎಂದು ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದ ಮೊದಲು ರಾಮಲೀಲಾ ಮೈದಾನದ ವೇದಿಕೆಯಲ್ಲಿ ವರ್ಣರಂಜಿತ ಸಂಗೀತ ಕಾರ್ಯಕ್ರಮ ನಡೆಯಲಿದೆ, ಇದರಲ್ಲಿ ಕೈಲಾಶ್ ಖೇರ್ ಸಹ ಪ್ರದರ್ಶನ ನೀಡಲಿದ್ದಾರೆ. 20 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಮುಖ ದೇಶಗಳ ರಾಜತಾಂತ್ರಿಕರನ್ನು ಸಹ ಆಹ್ವಾನಿಸಲಾಗಿದೆ. 50 ಕ್ಕೂ ಹೆಚ್ಚು ಚಲನಚಿತ್ರ ತಾರೆಯರು ಮತ್ತು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ. ಇದಲ್ಲದೆ, ದೆಹಲಿಯ ರೈತರು ಮತ್ತು ಲಾಡ್ಲಿ ಸಹೋದರಿಯರು ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಸಹ ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

ಖಾಸಗಿ ಕಟ್ಟಡಗಳಲ್ಲಿ ಮತಗಟ್ಟೆ ಸ್ಥಾಪನೆ ನಿಷ್ಪಕ್ಷಪಾತದಲ್ಲಿ ರಾಜಿ: ಚುನಾವಣಾ ಆಯೋಗಕ್ಕೆ ಮಮತಾ ಪತ್ರ

ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಹಾರದಲ್ಲಿ NDA ಸರ್ಕಾರ ಮಹತ್ವದ ಘೋಷಣೆ: ಸನಾತನ ಧರ್ಮ ಪ್ರಚಾರಕ್ಕಾಗಿ 38 ಜಿಲ್ಲೆಗಳಲ್ಲಿ ಸಂಚಾಲಕರ ನೇಮಕ!

ಗುಜರಾತ್‌: ಮತ್ತೊಬ್ಬ ಬಿಎಲ್‌ಒ ಶವವಾಗಿ ಪತ್ತೆ; ಬಾತ್ ರೂಮ್​​​​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವು

SCROLL FOR NEXT