ದ್ವಿಪಕ್ಷೀಯ ಮಾತುಕತೆ 
ದೇಶ

ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಭಾರತ, ಕತಾರ್ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ನವದೆಹಲಿ: ಭಾರತ ಮತ್ತು ಕತಾರ್ ಮಂಗಳವಾರ ಉಭಯ ದೇಶಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದಕ್ಕೆ ಸಹಿ ಹಾಕಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭೇಟಿ ನೀಡಿರುವ ಕತಾರ್ ಅಮೀರ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ ಉಭಯ ನಾಯಕರ ಸಮ್ಮುಖದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ವೃದ್ಧಿಸುವ ಒಪ್ಪಂದ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಕತಾರ್ ಅಮೀರ್ ಭೇಟಿ "ನಮ್ಮ ಬೆಳೆಯುತ್ತಿರುವ ಬಹುಮುಖ ಪಾಲುದಾರಿಕೆಗೆ ಮತ್ತಷ್ಟು ವೇಗ" ನೀಡುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪ್ರಧಾನಿ ಮೋದಿ ಮತ್ತು ಕತಾರ್ ಅಮೀರ್ ಹೈದರಾಬಾದ್ ಹೌಸ್‌ನಲ್ಲಿ ಹಲವಾರು ದ್ವಿಪಕ್ಷೀಯ ವಿಷಯಗಳನ್ನು ಒಳಗೊಂಡ ಮಾತುಕತೆ ನಡೆಸಿದರು.

ಭಾರತ ಮತ್ತು ಕತಾರ್ ನಡುವೆ ದ್ವಿಮುಖ ತೆರಿಗೆಯನ್ನು ತಪ್ಪಿಸುವ ಮತ್ತು ಆದಾಯದ ಮೇಲಿನ ತೆರಿಗೆಗೆ ಸಂಬಂಧಿಸಿದಂತೆ ಆರ್ಥಿಕ ವಂಚನೆಯನ್ನು ತಡೆಗಟ್ಟುವ ಪರಿಷ್ಕೃತ ಒಪ್ಪಂದವನ್ನು ಸಹ ಈ ವೇಳೆ ವಿನಿಮಯ ಮಾಡಿಕೊಳ್ಳಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಖುದ್ದು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್‌ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಬರಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT