ಸಾಂದರ್ಭಿಕ ಚಿತ್ರ 
ದೇಶ

ರಂಜಾನ್‌: ಮುಸ್ಲಿಂ ಸಿಬ್ಬಂದಿಗೆ 1 ಗಂಟೆ ಬೇಗ ಹೊರಡಲು ತೆಲಂಗಾಣ ಸರ್ಕಾರ ಅನುಮತಿ

ಈ ಕ್ರಮವನ್ನು ತುಷ್ಟೀಕರಣ ರಾಜಕೀಯ ಎಂದು ಟೀಕಿಸಿದ ಬಿಜೆಪಿ, ಹಿಂದೂ ಹಬ್ಬಗಳ ಸಮಯದಲ್ಲಿ ಇಂತಹ ಕ್ರಮಗಳನ್ನು ಏಕೆ ತೆಗೆದುಕೊಳ್ಳವುವುದಿಲ್ಲ ಎಂದು ಪ್ರಶ್ನಿಸಿದೆ.

ಹೈದರಾಬಾದ್: ಪವಿತ್ರ ರಂಜಾನ್ ತಿಂಗಳಲ್ಲಿ ಮುಸ್ಲಿಂ ನೌಕರರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ಹೊರಹೋಗಲು ಅನುಮತಿ ನೀಡಿ ತೆಲಂಗಾಣ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ರೇವಂತ್ ರೆಡ್ಡಿ ಸರ್ಕಾರದ ಈ ಕ್ರಮಕ್ಕೆ ಪ್ರತಿಪಕ್ಷ ಭಾರತೀಯ ಜನತಾ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಕ್ರಮವನ್ನು ತುಷ್ಟೀಕರಣ ರಾಜಕೀಯ ಎಂದು ಟೀಕಿಸಿದ ಬಿಜೆಪಿ, ಹಿಂದೂ ಹಬ್ಬಗಳ ಸಮಯದಲ್ಲಿ ಇಂತಹ ಕ್ರಮಗಳನ್ನು ಏಕೆ ತೆಗೆದುಕೊಳ್ಳವುವುದಿಲ್ಲ ಎಂದು ಪ್ರಶ್ನಿಸಿದೆ.

ಆದರೆ ತೆಲಂಗಾಣ ಸರ್ಕಾರ ಮಾತ್ರ ಇದು ಹೊಸದೇನಲ್ಲ. ಈ ಹಿಂದೆಯೂ ಈ ರೀತಿ ಅವಕಾಶ ನೀಡಲಾಗಿದೆ ಎಂದು ಹೇಳಿದೆ.

ಅಧಿಕೃತ ಮೂಲಗಳ ಪ್ರಕಾರ, ಮಾರ್ಚ್ 3 ರಿಂದ ಮಾರ್ಚ್ 31 ರವರೆಗೆ ರಂಜಾನ್ ಸಮಯದಲ್ಲಿ, ಅಗತ್ಯ ಸೇವೆಗಳಲ್ಲಿನ ಸಿಬ್ಬಂದಿ ಹೊರತುಪಡಿಸಿ, ಇತರ ಮುಸ್ಲಿಂ ನೌಕರರು ಸಂಜೆ 4 ಗಂಟೆಗೆ ಕಚೇರಿಯಿಂದ ಮನೆಗೆ ಹೋಗಲು ಅನುಮತಿ ನೀಡಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ರಾಜಾ ಸಿಂಗ್, ಮುಸ್ಲಿಂ ಉದ್ಯೋಗಿಗಳಿಗೆ ನೀಡಲಾದ ಅನುಮತಿಯು "ತುಷ್ಟೀಕರಣ ರಾಜಕೀಯ" ಎಂದು ಹೇಳಿದ್ದಾರೆ.

ಮುಸ್ಲಿಂ ಉದ್ಯೋಗಿಗಳು ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ತೆರಳಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಂತಿ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಆದರಂತೆ ಮುಸ್ಲಿಂ ಉದ್ಯೋಗಿಗಳು ಸಾಮಾನ್ಯವಾಗಿ ಸಂಜೆ 5.00 ಗಂಟೆಗೆ ತೆರಳುವ ಬದಲು ಸಂಜೆ 4.00 ಗಂಟೆಗೆ ಹೊರಡಲು ಅನುವು ಮಾಡಿಕೊಡುತ್ತದೆ. ಈ ಆದೇಶ ಮುಸ್ಲಿಂ ಶಿಕ್ಷಕರು, ಗುತ್ತಿಗೆ ನೌಕರರು, ಹೊರಗುತ್ತಿಗೆ, ಮಂಡಳಿ ಮತ್ತು ಸಾರ್ವಜನಿಕ ವಲಯದ ಕಾರ್ಮಿಕರಿಗೆ ಅನ್ವಯಿಸುತ್ತದೆ ಎನ್ನಲಾಗಿದೆ. ಏತನ್ಮಧ್ಯೆ ತುರ್ತು ಸಂದರ್ಭದಲ್ಲಿ ಅವರ ಅವಶ್ಯಕತೆ ಇದ್ದರೆ, ಸಂಜೆ 5.00 ಗಂಟೆವರೆಗೂ ಮುಂದುವರೆಯಬೇಕೆಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT