ಪ್ರಧಾನಿ ಮೋದಿ ಭೇಟಿ ಮಾಡಿದ ರಿಷಿ ಸುನಕ್ ಹಾಗೂ ಅವರ ಕುಟುಂಬ  
ದೇಶ

'ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ': ಕುಟುಂಬಸ್ಥರೊಂದಿಗೆ ಮೋದಿ ಭೇಟಿ ಮಾಡಿದ ಇಂಗ್ಲೆಂಡ್ ಮಾಜಿ ಪ್ರಧಾನಿ

ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ, ಭಾರತ-ಯುಕೆ ಸಂಬಂಧಗಳ ಬಗ್ಗೆ ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಭೇಟಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನವದೆಹಲಿ: ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವು ನಿನ್ನೆ ಮಂಗಳವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಉಭಯ ನಾಯಕರು ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.

ರಿಷಿ ಸುನಕ್ ಭಾರತದ ಉತ್ತಮ ಸ್ನೇಹಿತ, ಭಾರತ-ಯುಕೆ ಸಂಬಂಧಗಳ ಬಗ್ಗೆ ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಭೇಟಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇಂಗ್ಲೆಂಡ್ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದ್ದು ಸಂತೋಷವಾಯಿತು. ನಾವು ಅನೇಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದೇವೆ. ಸುನಕ್ ಅವರು ಭಾರತದ ಉತ್ತಮ ಸ್ನೇಹಿತ. ಭಾರತ-ಯುಕೆ ಸಂಬಂಧ ಮತ್ತಷ್ಟು ಗಟ್ಟಿಯಾಗಲು ಅವರು ಉತ್ಸುಕರಾಗಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಸುನಕ್ ಮತ್ತು ಅವರ ಕುಟುಂಬವನ್ನು ಸ್ವಾಗತಿಸಿದರು. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ ಸಿ ಮೋದಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಮ್ಮ ಭೇಟಿಯ ಸಮಯದಲ್ಲಿ ಸುನಕ್ ಕುಟುಂಬವು ಸಂಸತ್ ಭವನವನ್ನು ವೀಕ್ಷಿಸಿದರು. ಅದರ ವಾಸ್ತುಶಿಲ್ಪದ ಭವ್ಯತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ಯಾಲರಿಗಳು, ಕೊಠಡಿಗಳು, ಸಂವಿಧಾನ ಮಂಟಪ ಮತ್ತು ಸಂವಿಧಾನ್ ಸದನದಂತಹ ಸ್ಥಳಗಳಿಗೆ ಭೇಟಿ ನೀಡಿದರು.

ಪ್ರಸ್ತುತ ಭಾರತ ಭೇಟಿಯಲ್ಲಿರುವ ರಿಷಿ ಸುನಕ್ ಅವರು ಸೋಮವಾರ ದೆಹಲಿಯಲ್ಲಿ ವಿದೇಶಾಂಗ ಸಚಿವ (EAM) ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿದ್ದರು.

ಭಾರತದ ಪಂಜಾಬ್ ಮೂಲದ ಇಂಗ್ಲೆಂಡ್ ನ ಹ್ಯಾಂಪ್ಶೈರ್ ನ ಪೋಷಕರಿಗೆ ಜನಿಸಿದ ರಿಷಿ ಸುನಕ್, 2022 ರಿಂದ 2024 ರವರೆಗೆ ಯುಕೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ. ಭಾರತದ ಬಗ್ಗೆ ಪ್ರೀತಿ, ಗೌರವವನ್ನು ಹಿಂದಿನಿಂದಲೂ ಹೊಂದಿರುವ ಅವರು ಭಾರತವನ್ನು ದ್ವಿಪಕ್ಷೀಯ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಇಂಗ್ಲೆಂಡಿನ ಅವಶ್ಯಕ ಪಾಲುದಾರ ಎಂದು ಬಣ್ಣಿಸಿದ್ದಾರೆ.

ರಿಷಿ ಸುನಕ್ ಅವರು ಇತ್ತೀಚೆಗೆ ಅಂದರೆ ಮೊನ್ನೆ 15ರಂದು ತಮ್ಮ ಕುಟುಂಬಸ್ಥರೊಂದಿಗೆ ತಾಜ್ ಮಹಲ್ ಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video